ಸುರೇಶ್ ಪ್ರಭು 
ದೇಶ

ನಾನು ಸ್ವಯಂಪ್ರೇರಣೆಯಿಂದ ರೈಲ್ವೆ ಬಜೆಟ್ ಬಿಟ್ಟುಕೊಟ್ಟಿದ್ದೇನೆ: ಸುರೇಶ್ ಪ್ರಭು

ರೈಲ್ವೆ ಬಜೆಟ್ ಅನ್ನು ನಾನೇ ಸ್ವಯಂಪ್ರೇರಣೆಯಿಂದ ಬಿಟ್ಟುಕೊಟ್ಟಿದ್ದೇನೆ. ಹಣಕಾಸು ಸಚಿವಾಲಯ ರೈಲ್ವೆ ಬಜೆಟ್ ಅನ್ನು....

ನವದೆಹಲಿ: ರೈಲ್ವೆ ಬಜೆಟ್ ಅನ್ನು ನಾನೇ ಸ್ವಯಂಪ್ರೇರಣೆಯಿಂದ ಬಿಟ್ಟುಕೊಟ್ಟಿದ್ದೇನೆ. ಹಣಕಾಸು ಸಚಿವಾಲಯ ರೈಲ್ವೆ ಬಜೆಟ್ ಅನ್ನು ಕಿತ್ತುಕೊಂಡಿಲ್ಲ ಎಂದು ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಬುಧವಾರ ಹೇಳಿದ್ದಾರೆ.
ಈ ಬಾರಿ ಶತಮಾನದಷ್ಟು ಹಳೆಯದಾದ ರೈಲ್ವೆ ಬಜೆಟ್ ಗೆ ಗುಡ್ ಬೈ ಹೇಳಿ ಫೆಬ್ರವರಿ 1ರಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಮಂಡಿಸಿದ ಸಾಮಾನ್ಯ ಬಜೆಟ್ ನೊಂದಿಗೆ ವಿಲೀನಗೊಳಿಸಲಾಗಿದೆ. 
ಪಿಟಿಐ ಸುದ್ದಿ ಸಂಸ್ಥೆಯೊಂದಿಗೆ ನಡೆದ ಸಂವಾದದ ವೇಳೆ ರೈಲ್ವೆ ಬಜೆಟ್ ವಿಲೀನದ ಬಗ್ಗೆ ಪ್ರತಿಕ್ರಿಯಿಸಿದ ಸುರೇಶ್ ಪ್ರಭು ಅವರು, ಸ್ವತಃ ನಾನೇ ರೈಲ್ವೆ ಬಜೆಟ್ ಅನ್ನು ಸಾಮಾನ್ಯ ಬಜೆಟ್ ನೊಂದಿಗೆ ವಿಲೀನಗೊಳಿಸಿದ್ದೇನೆ. ಹಣಕಾಸು ಸಚಿವಾಲಯ ವಿಲೀನ ಮಾಡಿಲ್ಲ ಎಂದರು.
1924ರಿಂದ ಸಂಸತ್ತಿನಲ್ಲಿ ರೈಲ್ವೆ ಬಜೆಟ್ ಅನ್ನು ಪ್ರತ್ಯೆಕವಾಗಿ ಮಂಡಿಸಲಾಗುತ್ತಿತ್ತು. ಆದರೆ ಈ ಬಾರಿ ಅದನ್ನು ಸಾಮಾನ್ಯ ಬಜೆಟ್ ನೊಂದಿಗೆ ವಿಲೀನಗೊಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT