ಶೀಲಾ ದಿಕ್ಷೀತ್ 
ದೇಶ

ದೆಹಲಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಸರಿಯಾಗಿ ಪ್ರಚಾರ ನಡೆಸಿಲ್ಲ: ಶೀಲಾ ದೀಕ್ಷಿತ್

ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ, ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಆಕ್ರಮಣಕಾರಿಯಾದ ರೀತಿಯಲ್ಲಿ ..

ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಗೆ ಬೀರುತ್ತಿದೆ. 
ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಆಕ್ರಮಣಕಾರಿಯಾದ ರೀತಿಯಲ್ಲಿ ಚುನಾವಣಾ ಪ್ರಚಾರ ನಡೆಸಲಿಲ್ಲ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಹೇಳಿದ್ದಾರೆ.
ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಚಾರ ಶೈಲಿಗೆ ಅಸಮಾಧಾನ ವ್ಯಕ್ತ ಪಜಡಿಸಿರುವ ಅವರು, ಪ್ರಚಾರಕ್ಕೆ ನನ್ನನ್ನು ಆಹ್ವಾನಿಸಿಲ್ಲ ಎಂಗದು ಬೇಸರ ವ್ಯಕ್ತ ಪಡಿಸಿದ್ದಾರೆ.
ಇವಿಎಂ ಯಂತ್ರಗಳ ಬಗ್ಗೆ ಆಮ್ ಆದ್ಮಿ ಪಕ್ಷ ಮಾಡುತ್ತಿರುವ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಮಸ್ಯೆ ಬಗ್ಗೆ ಸೋತವರು ಹಾಗೂ ಗೆದ್ದವರು ಬೇರೆ ಬೇರೆ ರೀತಿಯ ದೃಷ್ಠಿಕೋನದಿಂದ  ಮಾತನಾಡುತ್ತಾರೆ, ಒಂದು ವೇಳೆ ಆ ರೀತಿಯ ಸಮಸ್ಯೆ ಇದ್ದರೇ ಚುನಾವಣಾ ಆಯೋಗ ಮತ್ತು ಸರ್ಕಾರ ಇದಕ್ಕೆ ಪರಿಹಾರ ಹುಡುಕಬೇಕು ಎಂದು ಹೇಳಿದ್ದಾರೆ.
ಹಿರಿಯ ಪಕ್ಷವಾದ ಕಾಂಗ್ರೆಸ್ ಕೆಟ್ಟ ಹಂತಕ್ಕೆ ಬಂದು ತಲುಪಿದೆ, ಆದರೆ ಮತ್ತೆ ತನ್ನ ಕಾಂಗ್ರೆಸ್ ತನ್ನ ಸ್ಥಾನಮಾನವನ್ನು ವಾಪಸ್ ಗಳಿಸಿಕೊಳ್ಳುತ್ತದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT