ಹಣಕಾಸು ಮಾಜಿ ಸಚಿವ ಯಶವಂತ್ ಸಿನ್ಹಾ 
ದೇಶ

'ಕಾಶ್ಮೀರ ಸಮಸ್ಯೆ'ಗೆ ಪ್ರಧಾನಿ ಮೋದಿ ತಮ್ಮದೇ ಆದ ಕಾರ್ಯತಂತ್ರವನ್ನು ಹೊಂದಿದ್ದಾರೆ: ಸಿನ್ಹಾಗೆ ಬಿಜೆಪಿ ಭರವಸೆ

ಜಮ್ಮು ಮತ್ತು ಕಾಶ್ಮೀರ ಸಮಸ್ಯ ಬಗೆಹರಿಕೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮದೇ ಆದ ತಂತ್ರವನ್ನು ಹೊಂದಿದ್ದಾರೆಂದು ಬಿಜೆಪಿ...

ಮುಂಬೈ: ಜಮ್ಮು ಮತ್ತು ಕಾಶ್ಮೀರ ಸಮಸ್ಯ ಬಗೆಹರಿಕೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮದೇ ಆದ ತಂತ್ರವನ್ನು ಹೊಂದಿದ್ದಾರೆಂದು ಬಿಜೆಪಿ ಬುಧವಾರ ಭರವಸೆ ನೀಡಿದೆ. 
ಈ ಕುರಿತಂತೆ ಮಾತನಾಡಿರುವ ಬಿಜೆಪಿ ನಾಯಕ ಎಸ್. ಪ್ರಕಾಶ್ ಅವರು, ಹಣಕಾಸು ಮಾಜಿ ಸಚಿವ ಯಶವಂತ್ ಸಿನ್ಹಾ ಅವರ ಉದ್ದೇಶ ಶ್ರೇಷ್ಠವಾದದ್ದು. ಆದರೆ, ಅವರು ತಮ್ಮದೇ ಆದ ಗುರಿಯನ್ನು ಹೊಂದಿದ್ದಾರೆ. ಇದರಂತೆ ಜಮ್ಮು ಮತ್ತು ಕಾಶ್ಮೀರ ಸಮಸ್ಯೆ ಬಗೆಹರಿಕೆಗೆ ಭಾರತ ಸರ್ಕಾರ ಕೂಡ ತನ್ನದೇ ಆದ ಆದ್ಯತೆ ಹಾಗೂ ಕಾರ್ಯತಂತ್ರಗಳನ್ನು ಹೊಂದಿದೆ ಎಂದು ಹೇಳಿದ್ದಾರೆ. 
ಸಿನ್ಹಾ ಅವರ ಹೇಳಿಕೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅಥವಾ ಪ್ರಧಾನಮಂತ್ರಿ ಕಚೇರಿಯಿಂದ ಯಾರಾದರೂ ಪ್ರತಿಕ್ರಿಯೆ ನೀಡುತ್ತಾರೆಂಬ ವಿಶ್ವಾಸ ನನಗಿದೆ ಎಂದು ತಿಳಿಸಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದ್ದ ಹಣಕಾಸು ಮಾಜಿ ಸಚಿವ ಯಶವಂತ್ ಸಿನ್ಹಾ ಅವರು, ಜಮ್ಮು ಮತ್ತು ಕಾಶ್ಮೀರ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಕೂಡಲೇ ಮಾತುಕತೆಯನ್ನು ನಡೆಸಬೇಕೆಂದು ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT