ಹಣಕಾಸು ಮಾಜಿ ಸಚಿವ ಯಶವಂತ್ ಸಿನ್ಹಾ 
ದೇಶ

'ಕಾಶ್ಮೀರ ಸಮಸ್ಯೆ'ಗೆ ಪ್ರಧಾನಿ ಮೋದಿ ತಮ್ಮದೇ ಆದ ಕಾರ್ಯತಂತ್ರವನ್ನು ಹೊಂದಿದ್ದಾರೆ: ಸಿನ್ಹಾಗೆ ಬಿಜೆಪಿ ಭರವಸೆ

ಜಮ್ಮು ಮತ್ತು ಕಾಶ್ಮೀರ ಸಮಸ್ಯ ಬಗೆಹರಿಕೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮದೇ ಆದ ತಂತ್ರವನ್ನು ಹೊಂದಿದ್ದಾರೆಂದು ಬಿಜೆಪಿ...

ಮುಂಬೈ: ಜಮ್ಮು ಮತ್ತು ಕಾಶ್ಮೀರ ಸಮಸ್ಯ ಬಗೆಹರಿಕೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮದೇ ಆದ ತಂತ್ರವನ್ನು ಹೊಂದಿದ್ದಾರೆಂದು ಬಿಜೆಪಿ ಬುಧವಾರ ಭರವಸೆ ನೀಡಿದೆ. 
ಈ ಕುರಿತಂತೆ ಮಾತನಾಡಿರುವ ಬಿಜೆಪಿ ನಾಯಕ ಎಸ್. ಪ್ರಕಾಶ್ ಅವರು, ಹಣಕಾಸು ಮಾಜಿ ಸಚಿವ ಯಶವಂತ್ ಸಿನ್ಹಾ ಅವರ ಉದ್ದೇಶ ಶ್ರೇಷ್ಠವಾದದ್ದು. ಆದರೆ, ಅವರು ತಮ್ಮದೇ ಆದ ಗುರಿಯನ್ನು ಹೊಂದಿದ್ದಾರೆ. ಇದರಂತೆ ಜಮ್ಮು ಮತ್ತು ಕಾಶ್ಮೀರ ಸಮಸ್ಯೆ ಬಗೆಹರಿಕೆಗೆ ಭಾರತ ಸರ್ಕಾರ ಕೂಡ ತನ್ನದೇ ಆದ ಆದ್ಯತೆ ಹಾಗೂ ಕಾರ್ಯತಂತ್ರಗಳನ್ನು ಹೊಂದಿದೆ ಎಂದು ಹೇಳಿದ್ದಾರೆ. 
ಸಿನ್ಹಾ ಅವರ ಹೇಳಿಕೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅಥವಾ ಪ್ರಧಾನಮಂತ್ರಿ ಕಚೇರಿಯಿಂದ ಯಾರಾದರೂ ಪ್ರತಿಕ್ರಿಯೆ ನೀಡುತ್ತಾರೆಂಬ ವಿಶ್ವಾಸ ನನಗಿದೆ ಎಂದು ತಿಳಿಸಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದ್ದ ಹಣಕಾಸು ಮಾಜಿ ಸಚಿವ ಯಶವಂತ್ ಸಿನ್ಹಾ ಅವರು, ಜಮ್ಮು ಮತ್ತು ಕಾಶ್ಮೀರ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಕೂಡಲೇ ಮಾತುಕತೆಯನ್ನು ನಡೆಸಬೇಕೆಂದು ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!