ಸಂಗ್ರಹ ಚಿತ್ರ 
ದೇಶ

ಸುಕ್ಮಾ ದಾಳಿ: ದೆಹಲಿ ಪಾಲಿಕೆ ಚುನಾವಣೆ ಗೆಲುವಿನ ಸಂಭ್ರಮಾಚರಣೆ ಮಾಡದಿರಲು ಬಿಜೆಪಿ ನಿರ್ಧಾರ

ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಹುಮತ ಸಾಧಿಸುತ್ತಿರುವ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿವಾಗಿದೆ. ಆದರೆ, ಚುನಾವಣಾ ಗೆಲುವಿನ ಸಂಭ್ರಮಾಚರಣೆ ಮಾಡದಿರಲು ಬಿಜೆಪಿ ಬುಧವಾರ ತೀರ್ಮಾನಿಸಿದೆ...

ನವದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಹುಮತ ಸಾಧಿಸುತ್ತಿರುವ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿವಾಗಿದೆ. ಆದರೆ, ಚುನಾವಣಾ ಗೆಲುವಿನ ಸಂಭ್ರಮಾಚರಣೆ ಮಾಡದಿರಲು ಬಿಜೆಪಿ ಬುಧವಾರ ತೀರ್ಮಾನಿಸಿದೆ. 
ಛತ್ತೀಸ್ಗಢದ ಸುಕಮಾ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ಭೀಕರ ದಾಳಿಯಲ್ಲಿ 25 ಸಿಆರ್'ಪಿಎಫ್ ಯೋಧರು ಹುತಾತ್ಮರಾಗಿದ್ದು, ಯೋಧರಿಗೆ ಗೌರವ ಸಲ್ಲಿಸಿರುವ ಬಿಜೆಪಿ ಚುನಾವಣಾ ಸಂಭ್ರಮಾಚರಣೆ ಕೈಬಿಡಲು ನಿರ್ಧಾರ ಕೈಗೊಂಡಿದೆ. 
ಈ ಕುರಿತಂತೆ ಮಾತನಾಡಿರುವ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿಯವರು, ಸುಕ್ಮಾ ದಾಳಿ ಹಿನ್ನಲೆಯಲ್ಲಿ ಚುನಾವಣೆಯ ಸಂಭ್ರಮಾಚರಣೆ ಮಾಡದಿರಲು ನಿರ್ಧಾರ ಕೈಕೊಳ್ಳಲಾಗಿದೆ. ಸಂಭ್ರಮಾಚರಣೆ ಮಾಡಂತೆ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. 
ಛತ್ತೀಸ್ಗಢ ರಾಜ್ಯದ ಸುಕ್ಮಾದ ರಸ್ತೆಯೊಂದರಲ್ಲಿ ಕಾರ್ಮಿಕರು ಕಾಮಗಾರಿ ಕಾರ್ಯವನ್ನು ಮಾಡುತ್ತಿದ್ದರು ಈ ವೇಳೆ 150ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಕಾರ್ಮಿಕರಿಗೆ ಭದ್ರತೆಯನ್ನು ಒದಗಿಸುತ್ತಿದ್ದರೆ. ಈ ವೇಳೆ ಸ್ಥಳಕ್ಕೆ ಬಂದ 300ಕ್ಕೂ ಹೆಚ್ಚು ನಕ್ಸಲರು ಏಕಾಏಕಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ 25 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT