ಸಾಂದರ್ಭಿಕ ಚಿತ್ರ 
ದೇಶ

ಒಡಿಶಾ ಕರಾವಳಿಯಲ್ಲಿ ಅಗ್ನಿ-3 ಅಣು ಕ್ಷಿಪಣಿ ಪರೀಕ್ಷಾರ್ಥ ಉಡಾವಣೆ ಯಶಸ್ವಿ

ಭಾರತೀಯ ಸೇನೆ ಒಡಿಶಾ ಕರಾವಳಿಯಲ್ಲಿ ಗುರುವಾರ ನೆಲದಿಂದ ನೆಲಕ್ಕೆ ನೆಗೆಯುವ ಅಗ್ನಿ-3 ಬ್ಯಾಲ್ಲಿಸ್ಟಿಕ್ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ....

ಭುವನೇಶ್ವರ: ಭಾರತೀಯ ಸೇನೆ ಒಡಿಶಾ ಕರಾವಳಿಯಲ್ಲಿ ಗುರುವಾರ ನೆಲದಿಂದ ನೆಲಕ್ಕೆ ನೆಗೆಯುವ ಪರಮಾಣು ಸಾಮರ್ಥ್ಯ ಹೊಂದಿರುವ ಅಗ್ನಿ-3 ಬ್ಯಾಲ್ಲಿಸ್ಟಿಕ್ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ಮಾಡಿದೆ.
ದೇಶಿ ತಂತ್ರಜ್ಞಾನದಿಂದ ಅಭಿವೃದ್ಧಿಪಡಿಸಲಾದ ಅತ್ಯಾಧುನಿಕ ಕ್ಷಿಪಣಿಯನ್ನು ಮೊಬೈಲ್ ಲಾಂಚರ್ ಮೂಲಕ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್(ಐಟಿಆರ್) ಉಡಾವಣಾ ಕಾಂಪ್ಲೆಕ್ಸ್ ನಿಂದ ಇಂದು ಬೆಳಗ್ಗೆ 9.30ಕ್ಕೆ ಉಡಾವಣೆ ಮಾಡಲಾಗಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಈ ಕ್ಷಿಪಣಿಗೆ ಸೇನೆಯ ಕಾರ್ಯತಂತ್ರ ಪಡೆ ಕಮಾಂಡ್(ಎಸ್ಎಫ್ ಸಿ) ಹಾಗೂ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ ಡಿಒ) ತಾಂತ್ರಿಕ ಬೆಂಬಲ ನೀಡಿದ್ದು, ತರಬೇತಿಯ ಒಂದು ಭಾಗವಾಗಿ ಇಂದು ಅಗ್ನಿ-3 ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆ ನಡೆಸಲಾಗಿದೆ.
ಮಿಷನ್ ನಿಯಂತ್ರಣ ಕೊಠಡಿಯಿಂದ ವಿಜ್ಞಾನಿಗಳು ಮತ್ತು ಸೇನಾ ಸಿಬ್ಬಂದಿ ಈ ಕ್ಷಿಪಣಿಯ ಚಲನವಲನವನ್ನು ಗಮನಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
17 ಮೀಟರ್‌ ಉದ್ದ ಹಾಗೂ 2 ಮೀಟರ್‌ ವ್ಯಾಸ ಹೊಂದಿರುವ ಇದು 2,200 ಕಿ.ಗ್ರಾಂ ತೂಕವಿದೆ. 3000ಕಿ.ಮೀ.ಗಿಂತಲೂ ದೂರದ ಗುರಿ ತಲುಪಬಲ್ಲ ಈ ಕ್ಷಿಪಣಿ 1.5 ಟನ್‌ ತೂಕದ ಪರಮಾಣು ಸಿಡಿತಲೆಯನ್ನೂ ಸಹ ಹೊತ್ತೊಯ್ಯಬಲ್ಲ ಸಾಮರ್ಥ್ಯ ಹೊಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT