ಸಾಂದರ್ಭಿಕ ಚಿತ್ರ 
ದೇಶ

ಉತ್ತರ ಪ್ರದೇಶ:ಮದುವೆಯಲ್ಲಿ ಗೋ ಮಾಂಸ ನೀಡದ್ದಕ್ಕಾಗಿ ಪತಿಯಿಂದ ತಲಾಖ್ ಬೆದರಿಕೆ

ಮದುವೆ ಸಮಾರಂಭವೊಂದರಲ್ಲಿ ಗೋಮಾಂಸ ಪೂರೈಸದಕ್ಕಾಗಿ ನವ ವಿವಾಹಿತೆಗೆ ತಲಾಖ್ ನೀಡುವುದಾಗಿ...

ನವದೆಹಲಿ:  ಮದುವೆ ಸಮಾರಂಭವೊಂದರಲ್ಲಿ ಗೋಮಾಂಸ ಪೂರೈಸದಕ್ಕಾಗಿ ನವ ವಿವಾಹಿತೆಗೆ ತಲಾಖ್ ನೀಡುವುದಾಗಿ ವರನ ಕುಟುಂಬದವರು ಬೆದರಿಕೆ ಹಾಕಿರುವ ಘಟನೆ ಉತ್ತರ ಪ್ರದೇಶದ ಲಖಿಂಪುರ್ಕೇರಿ ಎಂಬಲ್ಲಿ ನಡೆದಿದೆ.
ನವ ವಿವಾಹಿತೆ ಯುವತಿಯನ್ನು ಅಫ್ಸಾನಾ ಎಂದು ಗುರುತಿಸಲಾಗಿದ್ದು, ಮದುವೆ ದಿನ ಆಕೆಯ ಮನೆಯವರು ಗೋಮಾಂಸ ನೀಡಿ ಆತಿಥ್ಯ ಮಾಡದ್ದಕ್ಕಾಗಿ ತಲಾಖ್ ನೀಡುವುದಾಗಿ ಬೆದರಿಕೆಯೊಡ್ಡಿದ್ದಾರೆ.
ಅಫ್ಸಾನಾಳ ತಂದೆ ಸಲರಿ ಮದುವೆ ಬಳಿಕ ಆಕೆಯ ಮನೆಗೆ ಏನೋ ಕೆಲಸದ ನಿಮಿತ್ತ ಹೋಗಿದ್ದ ವೇಳೆ ಮಗಳಿಗೆ ಗಂಡನ ಮನೆಯವರು ಹಿಂಸೆ ನೀಡುತ್ತಿರುವುದು ಬೆಳಕಿಗೆ ಬಂದಿದೆ. ಗಂಡನ ಮನೆಯವರು ಆಕೆಗೆ ವಿಚ್ಛೇದನ ಕೊಡಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಮದುವೆ ದಿನ ಗೋಮಾಂಸ ನೀಡಿಲ್ಲ ಎಂದು ಮತ್ತು ಕುಟುಂಬದವರಿಗೆ  ವರದಕ್ಷಿಣೆ ನೀಡಿಲ್ಲ ಎಂಬ ಕಾರಣಕ್ಕೆ ತಗಾದೆ ತೆಗೆದಿದ್ದಾರೆ.
ಮೊನ್ನೆ ಏಪ್ರಿಲ್ 22ರಂದು ಶಾಸ್ತ್ರೋಕ್ತವಾಗಿ ಅದ್ದೂರಿಯಾಗಿ ವಿವಾಹ ನೆರವೇರಿಸಿದ್ದೆವು. ವರದಕ್ಷಿಣೆ ಕೂಡ ನೀಡಿದ್ದೇವೆ. ವಿಚ್ಛೇದನ ಬೆದರಿಕೆಯಿಂದಾಗಿ ನಾವು ಬಹಳ ಆತಂಕಕ್ಕೀಡಾಗಿದ್ದೇವೆ ಎನ್ನುತ್ತಾರೆ ಸಲರಿ.
ಗಂಡನ ಮನೆಯವರ ಬೆದರಿಕೆ ನಂತರ ಸಲರಿ ಗ್ರಾಮದ ಮುಖ್ಯಸ್ಥರು ಮತ್ತು ಸ್ಥಳೀಯ ಅಧಿಕಾರಿಗಳನ್ನು ಭೇಟಿ ಮಾಡಿದ್ದು ತಮ್ಮ ಮಗಳಿಗೆ ರಕ್ಷಣೆ ಒದಗಿಸಿ ಎಂದು ತಂದೆ ಕೇಳಿದ್ದಾರೆ. ಸ್ವತಃ ಅಫ್ಸಾನಾ ಬಹ್ರೈಚ್ ನ ಪೊಲೀಸ್ ಠಾಣೆಗೆ ತೆರಳಿ ಪರಿಸ್ಥಿತಿಯನ್ನು ವಿವರಿಸಿದ್ದಾಳೆ. 
ಆದರೆ ಯಾವುದೇ ಪ್ರಯೋಜನ ಸಿಕ್ಕಿಲ್ಲ. ತಮಗೆ ರಕ್ಷಣೆ ಮತ್ತು ನ್ಯಾಯ ಒದಗಿಸಿ ಎಂದು ಅಫ್ಸಾನಾ ತನ್ನ ತಂದೆ ಮತ್ತು ಸೋದರ ನಸೀಮ್ ಜೊತೆ ಒಂದು ಪೊಲೀಸ್ ಠಾಣೆಯಿಂದ ಇನ್ನೊಂದು ಪೊಲೀಸ್ ಠಾಣೆಗೆ ಅಲೆಯುತ್ತಿದ್ದಾರೆ. ಇದೀಗ ಕೊನೆಯದಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದಲಾದರೂ ನೆರವು ಸಿಗುತ್ತದೆಯೇ ಎಂಬ ನಿರೀಕ್ಷೆಯಲ್ಲಿ ಈ ಯುವತಿ ಮತ್ತು ಆಕೆಯ ತಂದೆ, ಸೋದರರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT