ಯೋಗಿ ಆದಿತ್ಯನಾಥ್ 
ದೇಶ

ಅಕ್ರಮ ಪಟಾಕಿ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಯೋಗಿ ಸೂಚನೆ

ಘಾಜಿಯಾಬಾದ್ ನ ಪಟಾಕಿ ಕಾರ್ಖಾನೆಯಲ್ಲಿ ನಿನ್ನೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಐವರು ಮೃತಪಟ್ಟ ನಂತರ....

ಲಖನೌ: ಘಾಜಿಯಾಬಾದ್ ನ ಪಟಾಕಿ ಕಾರ್ಖಾನೆಯಲ್ಲಿ ನಿನ್ನೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಐವರು ಮೃತಪಟ್ಟ ನಂತರ ಎಚ್ಚೆತ್ತುಕೊಂಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಅಕ್ರಮ ಪಟಾಕಿ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶನಿವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಕ್ರಮ ಪಟಾಕಿ ಕಾರ್ಖಾನೆಗಳನ್ನು ಗುರುತಿಸಿ ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಆದಿತ್ಯನಾಥ್ ಅವರು ಇಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆದೇಶಿಸಿದ್ದಾರೆ.
ಪರವಾನಗಿ ಪಡೆಯದೇ ಯಾವುದೇ ಪಟಾಕಿ ಕಾರ್ಖಾನೆ ಕಾರ್ಯನಿರ್ವಹಿಸುವಂತಿಲ್ಲ ಮತ್ತು ಜನವಸತಿ ಪ್ರದೇಶದಲ್ಲಿ ಪಟಾಕಿ ಕಾರ್ಖಾನೆ ಇಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಯೋಗಿ ಆದಿತ್ಯನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಿನ್ನೆಯಷ್ಟೇ ಘಾಜಿಯಾಬಾದ್ ನ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಜೀವ ದಹನವಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

SCROLL FOR NEXT