ಯೋಗಿ ಆದಿತ್ಯನಾಥ್ 
ದೇಶ

ಅಕ್ರಮ ಪಟಾಕಿ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಯೋಗಿ ಸೂಚನೆ

ಘಾಜಿಯಾಬಾದ್ ನ ಪಟಾಕಿ ಕಾರ್ಖಾನೆಯಲ್ಲಿ ನಿನ್ನೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಐವರು ಮೃತಪಟ್ಟ ನಂತರ....

ಲಖನೌ: ಘಾಜಿಯಾಬಾದ್ ನ ಪಟಾಕಿ ಕಾರ್ಖಾನೆಯಲ್ಲಿ ನಿನ್ನೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಐವರು ಮೃತಪಟ್ಟ ನಂತರ ಎಚ್ಚೆತ್ತುಕೊಂಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಅಕ್ರಮ ಪಟಾಕಿ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶನಿವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಕ್ರಮ ಪಟಾಕಿ ಕಾರ್ಖಾನೆಗಳನ್ನು ಗುರುತಿಸಿ ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಆದಿತ್ಯನಾಥ್ ಅವರು ಇಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆದೇಶಿಸಿದ್ದಾರೆ.
ಪರವಾನಗಿ ಪಡೆಯದೇ ಯಾವುದೇ ಪಟಾಕಿ ಕಾರ್ಖಾನೆ ಕಾರ್ಯನಿರ್ವಹಿಸುವಂತಿಲ್ಲ ಮತ್ತು ಜನವಸತಿ ಪ್ರದೇಶದಲ್ಲಿ ಪಟಾಕಿ ಕಾರ್ಖಾನೆ ಇಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಯೋಗಿ ಆದಿತ್ಯನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಿನ್ನೆಯಷ್ಟೇ ಘಾಜಿಯಾಬಾದ್ ನ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಜೀವ ದಹನವಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

Ebola ಭೀತಿ: ಏರ್ ಲೈನ್ ಗಳಿಗೆ ಡಿಜಿಸಿಎ SOP ಬಿಡುಗಡೆ

SCROLL FOR NEXT