ನಜೀಂ ಝೈದಿ 
ದೇಶ

ಚುನಾವಣಾ ಆಯೋಗದಿಂದ ಇವಿಎಂ ವಿವಾದ ಕುರಿತು ಶೀಘ್ರದಲ್ಲೇ ಸರ್ವಪಕ್ಷ ಸಭೆ: ನಜೀಂ ಝೈದಿ

ಇವಿಎಂ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದಿಂದ ಶೀಘ್ರದಲ್ಲೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು...

ನವದೆಹಲಿ: ಇವಿಎಂ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದಿಂದ ಶೀಘ್ರದಲ್ಲೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ನಜೀಂ ಝೈದಿ ಅವರು ಶನಿವಾರ ಹೇಳಿದ್ದಾರೆ.
ಇವಿಎಂ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಝೈದಿ ಅವರು, ಈ ಸಂಬಂಧ ಶೀಘ್ರದಲ್ಲಿ ಸರ್ವಪಕ್ಷ ಸಭೆ ಕರೆದು, ನಮ್ಮ ತಂತ್ರಜ್ಞಾನ ಸುರಕ್ಷತಾ ವ್ಯವಸ್ಥೆಯ ಪ್ರಕಾರ ಇವಿಎಂಗಳು ಸುರಕ್ಷಿತವಾಗಿದ್ದು, ಅವುಗಳನ್ನು ತಿರುಚಲು ಸಾಧ್ಯವಿಲ್ಲ ಎಂಬುದನ್ನು ಮನವರಿಕೆ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ.
ಇದೇ ವೇಳೆ ಚುನಾವಣೆಯಲ್ಲಿ ಮತ್ತಷ್ಟು ಪಾರದರ್ಶಕತೆ ತರಲು ಮತ್ತು ಇವಿಎಂ ಬಗ್ಗೆ ಜನರ ನಂಬಿಕೆ ಗಳಿಸುವುದಕ್ಕಾಗಿ ಮುಂಬರುವ ಎಲ್ಲಾ ಚುನಾವಣೆಯ  ಮತದಾನ ಪ್ರಕ್ರಿಯೆಯಲ್ಲಿ ಎಲೆಕ್ಟ್ರಾನಿಕ್‌ ಮತ ಯಂತ್ರ(ಇವಿಎಂ)ಗಳ ಜತೆಗೆ ಮತ ಪರಿಶೀಲನಾ ವ್ಯವಸ್ಥೆ(VVPAT–voter verifiable paper audit trail)ಯನ್ನು ಅಳವಡಿಸಿಕೊಳ್ಳುವ ಉದ್ದೇಶ ಇದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT