ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ 
ದೇಶ

ಮುಂದಿನ 2 ವರ್ಷಗಳಲ್ಲಿ ನೌಕರರ ಭವಿಷ್ಯನಿಧಿ ಸಂಸ್ಥೆಯಿಂದ 10 ಲಕ್ಷ ಮನೆಗಳ ನಿರ್ಮಾಣ: ಬಂಡಾರು ದತ್ತಾತ್ರೇಯ

ನೌಕರರ ಭವಿಷ್ಯ ನಿಧಿ ಸಂಘ ನಗರಾಭಿವೃದ್ಧಿ ಸಚಿವಾಲಯ ಜೊತೆ ಸೇರಿ ಮುಂದಿನ ಎರಡು ವರ್ಷಗಳಲ್ಲಿ 10...

ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಘ ನಗರಾಭಿವೃದ್ಧಿ ಸಚಿವಾಲಯ ಜೊತೆ ಸೇರಿ ಮುಂದಿನ ಎರಡು ವರ್ಷಗಳಲ್ಲಿ 10 ಲಕ್ಷ ಮನೆಗಳನ್ನು ನಿರ್ಮಿಸಲಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ತಿಳಿಸಿದ್ದಾರೆ.
2022ರ ವೇಳೆಗೆ ಎಲ್ಲರಿಗೂ ಮನೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಆಶಯವನ್ನು ಈಡೇರಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಈ ಬಗ್ಗೆ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಸಚಿವ ದತ್ತಾತ್ರೇಯ, ನಾವು ಗುಂಪು ವಿಮಾ ಮನೆ ಯೋಜನೆಯನ್ನು ಆರಂಭಿಸಿದ್ದು ನೌಕರರ ಭವಿಷ್ಯ ನಿಧಿ ಚಂದಾದಾರರಿಗೆ ಹಂತ ಹಂತವಾಗಿ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು. ಮನೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರಗಳು ಭೂಮಿ ಒದಗಿಸಬೇಕೆಂದು ಅವರು ಒತ್ತಾಯಿಸಿದರು.
ಆರ್ಥಿಕವಾಗಿ ಹಿಂದುಳಿದವರಿಗೆ ಯೋಜನೆಗಳ ಫಲಾನುಭವಿಗಳಿಗೆ ಬಡ್ಡಿ ಸಬ್ಸಿಡಿಯಾಗಿ 2.2 ಲಕ್ಷ ರೂಪಾಯಿಗಳನ್ನು ಒದಗಿಸಲು ನಗರಾಭಿವೃದ್ಧಿ ಸಚಿವಾಲಯ ಜೊತೆ ಮಾತುಕತೆ ನಡೆಸಲಾಗುವುದು. ಅದೇ ರೀತಿ ನೌಕರರ ಭವಿಷ್ಯ ನಿಧಿ ಕಚೇರಿಯಲ್ಲಿ ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದವರಿಗೆ 6ರಿಂದ 12 ಲಕ್ಷ ಮೊತ್ತದ ಸಾಲಕ್ಕೆ ಶೇಕಡಾ 3ರ ಬಡ್ಡಿದರದಲ್ಲಿ ಸಬ್ಸಿಡಿ, 18 ಲಕ್ಷದವರೆಗಿನ ಸಾಲಕ್ಕೆ ಶೇಕಡಾ 4ರ ಬಡ್ಡಿದರದಲ್ಲಿ ಸಬ್ಸಿಡಿ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT