ಸಂಗ್ರಹ ಚಿತ್ರ 
ದೇಶ

ದಂತೇವಾಡದಲ್ಲಿ ಇಬ್ಬರು ಕುಖ್ಯಾತ ನಕ್ಸಲರ ಬಂಧನ!

ಸುಕ್ಮಾ ದಾಳಿ ಬೆನ್ನಲ್ಲೇ ನಕ್ಸಲರ ವಿರುದ್ಧದ ಕಾರ್ಯಾಚರಣೆ ವ್ಯಾಪಕವಾಗಿದ್ದು, ಛತ್ತೀಸ್ ಘಡದ ದಂತೇವಾಡದಲ್ಲಿ ಪೊಲೀಸ್ ಅಧಿಕಾರಿಗಳು ಭಾನುವಾರ ಇಬ್ಬರು ಕುಖ್ಯಾತ ನಕ್ಸಲರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಯ್ ಪುರ: ಸುಕ್ಮಾ ದಾಳಿ ಬೆನ್ನಲ್ಲೇ ನಕ್ಸಲರ ವಿರುದ್ಧದ ಕಾರ್ಯಾಚರಣೆ ವ್ಯಾಪಕವಾಗಿದ್ದು, ಛತ್ತೀಸ್ ಘಡದ ದಂತೇವಾಡದಲ್ಲಿ ಪೊಲೀಸ್ ಅಧಿಕಾರಿಗಳು ಭಾನುವಾರ ಇಬ್ಬರು ಕುಖ್ಯಾತ ನಕ್ಸಲರನ್ನು ಬಂಧಿಸಿದ್ದಾರೆ ಎಂದು  ತಿಳಿದುಬಂದಿದೆ.

ಬಂಧಿತರ ಪೈಕಿ ಓರ್ವ ಮೋಸ್ಟ್ ವಾಂಟೆಡ್ ಎಂದು ತಿಳಿದುಬಂದಿದ್ದು, ಈತನ ಬಂಧನಕ್ಕಾಗಿ ಈ ಹಿಂದೆ ಛತ್ತೀಸ್ ಘಡ ಪೊಲೀಸರು 2 ಲಕ್ಷ ಬಹುಮಾನ ಘೋಷಣೆ ಮಾಡಿದ್ದರು. ದಂತೇವಾಡದಲ್ಲಿ ನಕ್ಸಲರ ಇರುವಿಕೆ ಕುರಿತು ಮಾಹಿತಿ  ಕಲೆಹಾಕಿದ ಅಧಿಕಾರಿಗಳು ಕೂಡಲೇ ದಾಳಿ ಮಾಡಿ ಇಬ್ಬರು ನಕ್ಸಲರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಬಂಧಿತ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ವಿಚಾರಣೆ ತೀವ್ರಗೊಂಡಿದೆ.

ಇದೇ ಛತ್ತೀಸ್ ಘಡದ ಸುಕ್ಮಾದಲ್ಲಿ ಸುಮಾರು 300ಕ್ಕೂ ಅಧಿಕ ನಕ್ಸಲರು ಏಕಕಾಲದಲ್ಲಿ ದಾಳಿ ಮಾಡಿ 25ಕ್ಕೂ ಹೆಚ್ಚು ಮಂದಿಯನ್ನು ಸಿಆರ್ ಪಿಎಫ್ ಯೋಧರನ್ನು ಕೊಂದು ಹಾಕಿದ್ದರು. ಈ ಭೀಕರ ಘಟನೆ ಬಳಿಕ ದೇಶಾದ್ಯಂತ ನಕ್ಸಲ್  ನಿಗ್ರಹ ಕಾರ್ಯಚರಣೆ ಚುರುಕುಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT