ಸಂಗ್ರಹ ಚಿತ್ರ 
ದೇಶ

ದಂತೇವಾಡದಲ್ಲಿ ಇಬ್ಬರು ಕುಖ್ಯಾತ ನಕ್ಸಲರ ಬಂಧನ!

ಸುಕ್ಮಾ ದಾಳಿ ಬೆನ್ನಲ್ಲೇ ನಕ್ಸಲರ ವಿರುದ್ಧದ ಕಾರ್ಯಾಚರಣೆ ವ್ಯಾಪಕವಾಗಿದ್ದು, ಛತ್ತೀಸ್ ಘಡದ ದಂತೇವಾಡದಲ್ಲಿ ಪೊಲೀಸ್ ಅಧಿಕಾರಿಗಳು ಭಾನುವಾರ ಇಬ್ಬರು ಕುಖ್ಯಾತ ನಕ್ಸಲರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ರಾಯ್ ಪುರ: ಸುಕ್ಮಾ ದಾಳಿ ಬೆನ್ನಲ್ಲೇ ನಕ್ಸಲರ ವಿರುದ್ಧದ ಕಾರ್ಯಾಚರಣೆ ವ್ಯಾಪಕವಾಗಿದ್ದು, ಛತ್ತೀಸ್ ಘಡದ ದಂತೇವಾಡದಲ್ಲಿ ಪೊಲೀಸ್ ಅಧಿಕಾರಿಗಳು ಭಾನುವಾರ ಇಬ್ಬರು ಕುಖ್ಯಾತ ನಕ್ಸಲರನ್ನು ಬಂಧಿಸಿದ್ದಾರೆ ಎಂದು  ತಿಳಿದುಬಂದಿದೆ.

ಬಂಧಿತರ ಪೈಕಿ ಓರ್ವ ಮೋಸ್ಟ್ ವಾಂಟೆಡ್ ಎಂದು ತಿಳಿದುಬಂದಿದ್ದು, ಈತನ ಬಂಧನಕ್ಕಾಗಿ ಈ ಹಿಂದೆ ಛತ್ತೀಸ್ ಘಡ ಪೊಲೀಸರು 2 ಲಕ್ಷ ಬಹುಮಾನ ಘೋಷಣೆ ಮಾಡಿದ್ದರು. ದಂತೇವಾಡದಲ್ಲಿ ನಕ್ಸಲರ ಇರುವಿಕೆ ಕುರಿತು ಮಾಹಿತಿ  ಕಲೆಹಾಕಿದ ಅಧಿಕಾರಿಗಳು ಕೂಡಲೇ ದಾಳಿ ಮಾಡಿ ಇಬ್ಬರು ನಕ್ಸಲರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಬಂಧಿತ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ವಿಚಾರಣೆ ತೀವ್ರಗೊಂಡಿದೆ.

ಇದೇ ಛತ್ತೀಸ್ ಘಡದ ಸುಕ್ಮಾದಲ್ಲಿ ಸುಮಾರು 300ಕ್ಕೂ ಅಧಿಕ ನಕ್ಸಲರು ಏಕಕಾಲದಲ್ಲಿ ದಾಳಿ ಮಾಡಿ 25ಕ್ಕೂ ಹೆಚ್ಚು ಮಂದಿಯನ್ನು ಸಿಆರ್ ಪಿಎಫ್ ಯೋಧರನ್ನು ಕೊಂದು ಹಾಕಿದ್ದರು. ಈ ಭೀಕರ ಘಟನೆ ಬಳಿಕ ದೇಶಾದ್ಯಂತ ನಕ್ಸಲ್  ನಿಗ್ರಹ ಕಾರ್ಯಚರಣೆ ಚುರುಕುಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT