ಶಹರಾಣಾಪುರ್: ಭಾರತದ ಮಾರುಕಟ್ಟೆಯಿಂದ ಮುಂದಿನ 5 ವರ್ಷಗಳಲ್ಲಿ ಬಹುರಾಷ್ಟ್ರೀಯ ಕಂಪನಿಗಳನ್ನು ದೇಶದಿಂದ ಹೊರ ಓಡಿಸಲಾಗುತ್ತದೆ ಎಂದು ಯೋಗಗುರು ಬಾಬಾ ರಾಮ ದೇವ್ ಹೇಳಿದ್ದಾರೆ.
ಯೋಗಿ ಭರತ ಭೂಷಣ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬಾಬಾ ರಾಮ್ ದೇವ್, ವಿದೇಶಿ ಕಂಪನಿಗಳನ್ನು ಈಸ್ಟ್ ಇಂಡಿಯಾ ಕಂಪನಿಗೆ ಹೋಲಿಸಿದ್ದಾರೆ. ಈ ವಿದೇಶಿ ಕಂಪನಿಗಳು ಭಾರತಕ್ಕೆ ಕಾಲಿಟ್ಟಿರುವುದು ದೇಶವನ್ನು ಲೂಟಿ ಮಾಡಲು ಎಂದು ಆರೋಪಿಸಿದ್ದಾರೆ. ಅಂಥ ಕಂಪನಿಗಳನ್ನು ಇಲ್ಲಿಂದ ಓಡಿಸಿ ಭಾರತವನ್ನು ಎಂಎನ್ ಸಿ ಕಂಪನಿಗಳಿಂದ ಮುಕ್ತವಾದ ರಾಷ್ಟ್ರವನ್ನಾಗಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಈ ವಿದೇಶಿ ಕಂಪನಿಗಳು ನಮ್ಮ ದೇಶವನ್ನು ಅಭಿವೃದ್ಧಿಗೊಳಿಸಲು ಬಂದಿಲ್ಲ, ಬದಲಾಗಿ ಲೂಟಿ ಮಾಡುತ್ತಿವೆ ಎಂದು ದೂರಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ, ಹೊಸ ತಂತ್ರಜ್ಞಾನ ಬಳಸಿ ಹೇಗೆ ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದನೆ ಮಾಡಬೇಕು ಎಂಬುದರ ಬಗ್ಗೆ ರೈತರಿಗೆ ತರಬೇತಿ ನೀಡಲಾಗುವುದು ಎಂದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos