ಸ್ಪರ್ಧೆಗೆ ಬಿದ್ದು ಬಸ್ ಚಲಾಯಿಸಿದ ಚಾಲಕರು 
ದೇಶ

ತಮಿಳುನಾಡು ಬಸ್ ಡ್ರೈವರ್ ಗಳ ರೇಸ್ ನಿಂದಾಗಿ ಬಾಯಿಗೆ ಬಂತು ಪ್ರಯಾಣಿಕರ ಜೀವ!

ತಮಿಳುನಾಡಿನ ಇಬ್ಬರು ಬೇಜವಾಬ್ದಾರಿ ಬಸ್ ಚಾಲಕರಿಂದಾಗಿ ಅದರೊಳಗಿದ್ದ ಪ್ರಯಾಣಿಕರಿಗೆ ಜೀವವನ್ನು ಕೈಯಲ್ಲಿ ಹಿಡಿದ ಅನುಭವವಾಗಿದೆ.

ಚೆನ್ನೈ: ತಮಿಳುನಾಡಿನ ಇಬ್ಬರು ಬೇಜವಾಬ್ದಾರಿ ಬಸ್ ಚಾಲಕರಿಂದಾಗಿ ಅದರೊಳಗಿದ್ದ ಪ್ರಯಾಣಿಕರಿಗೆ ಜೀವವನ್ನು ಕೈಯಲ್ಲಿ ಹಿಡಿದ ಅನುಭವವಾಗಿದೆ.

ತಮಿಳುನಾಡಿನ ಕೊಯಮತ್ತೂರು-ಪೊಲ್ಲಾಚಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಎರಡು ಖಾಸಗಿ ಬಸ್ ಗಳು ಇದ್ದಕ್ಕಿದ್ದಂತೆ ಸ್ಪರ್ಧೆಗಳಿದಿದ್ದು, ಹಳ್ಳ ದಿಣ್ಣೆ ಅಷ್ಟೇ ಏಕೆ ಒನ್ ವೇ ಕೂಡ ನೋಡದೇ ಏಕಾಏಕಿ ರಸ್ತೆಯ ಉಭಯ ಬದಿಗಳಲ್ಲಿ  ಅತ್ಯಂತ ವೇಗವಾಗಿ ಬಸ್ ಗಳನ್ನು ಚಲಾಯಿಸಿದ್ದಾರೆ. ಬಸ್ ಗಳ ಹಿಂಬದಿಯಲ್ಲಿ ಬರುತ್ತಿದ್ದ ಬೈಕ್ ಚಾಲಕರೊಬ್ಬರು ಇದನ್ನು ತಮ್ಮ ಮೊಬೈಲ್ ಮೂಲಕ ಚಿತ್ರೀಕರಿಸಿದ್ದು, ಈ ವಿಡಿಯೋ ಇದೀಗ ವೈರಲ್ ಆಗಿದೆ.

ಇನ್ನು ತಮಿಳುನಾಡಿನ ವಿವಿಧೆಡ ಭಾರಿ ವಾಹನಗಳು ಹೆದ್ದಾರಿಗಳಲ್ಲಿ ಸ್ಪರ್ಧೆಗಳಿದು ಜನರ ಜೀವಕ್ಕೆ ಮಾರಕವಾಗುತ್ತಿದೆ ಎಂದು ಹಲವು ಬಾರಿ ದೂರು ನೀಡಲಾಗಿದೆ. ಸಾಕಷ್ಟು ಬಾರಿ ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆಯಾದರೂ  ಬಸ್ ಚಾಲಕರ ಈ ಹೆದ್ದಾರಿ ರೇಸ್ ಗಳು ಮಾತ್ರ ನಿಂತಿಲ್ಲ. ಚಾಲಕರ ಈ ನಿರ್ಲಕ್ಷ್ಯದಿಂದಾಗಿ ಕೇವಲ ಬಸ್ ನೊಳಗಿರುವ ಪ್ರಯಾಣಿಕರಿಗೆ ಮಾತ್ರವಲ್ಲ ಬಸ್ ಹೊರಗೆ ರಸ್ತೆಗಳಲ್ಲಿ ಸಂಚರಿಸುವ ಇತರೆ ವಾಹನಗಳು ಹಾಗೂ  ಪಾದಾಚಾರಿಗಳ ಜೀವಕ್ಕೂ ಈ ಚಾಲಕರು ಕುತ್ತು ತರುತ್ತಿದ್ದಾರೆ.

ಸರ್ಕಾರಿ ಅಂಕಿಅಂಶಗಳ ಪ್ರಕಾರವೇ 2015ರ ಒಂದೇ ವರ್ಷದಲ್ಲಿ ರಸ್ತೆ ಅಪಘಾತಗಳಲ್ಲಿ ಬರೊಬ್ಬರಿ 15,642 ಮಂದಿ ಸಾವನ್ನಪ್ಪಿದ್ದಾರೆ.

ಬಸ್ ಚಾಲಕರ ವಿರುದ್ಧ ಕ್ರಮ: ಪೊಲೀಸ್
ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಇತ್ತ ಎಚ್ಚೆತ್ತುಕೊಂಡಿರುವ ತಮಿಳುನಾಡು ಪೊಲೀಸರು ಪ್ರಸ್ತುತ ಆರೋಪಿತ ಚಾಲಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT