ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ 
ದೇಶ

ಕಾಂಗ್ರೆಸ್ ಅಧ್ಯಕ್ಷರನ್ನು ಚುನಾವಣೆ ಮೂಲಕವಲ್ಲದೆ, ಒಮ್ಮತದಿಂದ ಆಯ್ಕೆ ಮಾಡಬೇಕು: ಅಮರೀಂದರ್ ಸಿಂಗ್

ಕಾಂಗ್ರೆಸ್ ಅಧ್ಯಕ್ಷರನ್ನು ಒಮ್ಮತದ ಮೂಲಕ ಆಯ್ಕೆ ಮಾಡಬೇಕೆ ಹೊರತು ಚುನಾವಣೆ ಮೂಲಕವಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಹೇಳಿದ್ದಾರೆ...

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರನ್ನು ಒಮ್ಮತದ ಮೂಲಕ ಆಯ್ಕೆ ಮಾಡಬೇಕೆ ಹೊರತು ಚುನಾವಣೆ ಮೂಲಕವಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಹೇಳಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಸೋನಿಯಾ ಗಾಂಧಿಯವರವೇ ಮತ್ತೊಮ್ಮೆ ಪಕ್ಷದ ಪಕ್ಷರಾಗಿ ಮುಂದುವರಯುವುದಾದರೆ, ಈ ಬಗ್ಗೆ ಅವರು ನಿರ್ಧಾರ ಕೈಗೊಂಡರೆ ನಮಗೆ ಸಂತಸವಾಗುತ್ತದೆ. ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡುವುದಾದರೆ, ಒಮ್ಮತದ ಮೂಲಕ ಆಯ್ಕೆ ಮಾಡಬೇಕು. ಚುನಾವಣೆ ಮೂಲಕದಿಂದಲ್ಲ ಎಂದು ಹೇಳಿದ್ದಾರೆ. 
ಚುನಾವಣೆ ಯಾವಾಗಲೂ ಕಹಿಯಾಗಿಯೇ ಇರುತ್ತದೆ. ಆದರೆ, ಒಮ್ಮತ ಎಂಬುದು ಸದಾಕಾಲ ಪಕ್ಷವನ್ನು ಒಗ್ಗಟ್ಟಿನಿಂದ ಇರುವಂತೆ ಮಾಡುತ್ತದೆ. ಪಕ್ಷದ ಅಧ್ಯಕ್ಷರನ್ನೂ ಒಮ್ಮತದ ಮೂಲಕವೇ ಆಯ್ಕೆ ಮಾಡಬೇಕು.
ಸೋನಿಯಾ ಗಾಂಧಿಯವರು ಪಕ್ಷಕ್ಕಾಗಿ ಬಹಳ ಶ್ರಮ ಪಟ್ಟಿದ್ದಾರೆ. ಅಧ್ಯಕ್ಷ ಸ್ಥಾನದಲ್ಲಿ ಅವರೇ ಮುಂದುವರೆಯುವುದಾದರೆ, ಪಕ್ಷ ಬಹಳ ಸಂಸತ ವ್ಯಕ್ತಪಡಿಸುತ್ತದೆ. ಒಂದು ವೇಳೆ ಸ್ಥಾನ ಬಿಡುವುದಾದರೆ, ರಾಹುಲ್ ಆ ಸ್ಥಾನದಲ್ಲಿ ಕುಳಿತುಕೊಳ್ಳುವ ಮನೋಭಾವವನ್ನು ಹೊಂದಿದ್ದಾರೆ. ರಾಹುಲ್ ಪಕ್ಷದ ಉಪಾಧ್ಯಕ್ಷರಾದಾಗಿನಿಂದಲೂ 2-3 ವರ್ಷದಿಂದಲೂ ನಾನು ಅವರೊಂದಿಗೆ ಕೆಲಸ ಮಾಡಿದ್ದೇನೆ. ಸ್ಥಾನಕ್ಕೆ ಅವರು ಸೂಕ್ತರಾಗಿದ್ದಾರೆಂದು ಎನಿಸಿದೆ. ನಾನು ರಾಹುಲ್ ಅವರಿಗೆ ಮತ ಹಾಕುತ್ತೇನೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT