ಸುಪ್ರೀಂಕೋರ್ಟ್ 
ದೇಶ

ನ್ಯಾ.ಕರ್ಣನ್ ಮಾನಸಿಕ ಆರೋಗ್ಯ ಪರೀಕ್ಷಿಸಿ: ಅಧಿಕಾರಿಗಳಿಗೆ ಸುಪ್ರೀಂಕೋರ್ಟ್ ಸೂಚನೆ

ನ್ಯಾಯಮೂರ್ತಿ ಕರ್ಣನ್ ಮಾನಸಿಕ ಆರೋಗ್ಯ ಪರೀಕ್ಷೆ ನಡೆಸುವಂತೆ ಸುಪ್ರೀಂಕೋರ್ಟ್ ಸೋಮವಾರ ಅಧಿಕಾರಿಗಳಿಗೆ ಆದೇಶ ನೀಡಿದೆ...

ನವದೆಹಲಿ: ನ್ಯಾಯಮೂರ್ತಿ ಕರ್ಣನ್ ಮಾನಸಿಕ ಆರೋಗ್ಯ ಪರೀಕ್ಷೆ ನಡೆಸುವಂತೆ ಸುಪ್ರೀಂಕೋರ್ಟ್ ಸೋಮವಾರ ಅಧಿಕಾರಿಗಳಿಗೆ ಆದೇಶ ನೀಡಿದೆ. 
ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಕರ್ಣನ್ ಅವರ ಮಾನಸಿಕ ಆರೋಗ್ಯ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವ ಸುಪ್ರೀಂ, ಪರೀಕ್ಷೆಗೆ ಕೋಲ್ಕತಾ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯಿಂದ ವೈದ್ಯಕೀಯ ತಂಡ ರಚಿಸುವಂತೆ ಆದೇಶಿಸಿದೆ. 
ನ್ಯಾಯಾಂಗ ನಿಂದನೆ ಕುರಿತ ವಿಚಾರಣೆ ನ್ಯಾಯಾಲಯದ ಅಂಗಳದಲ್ಲಿರುವುದರಿಂದ ಫೆಬ್ರವರಿ 8 ರಿಂದ ಕರ್ಣನ್ ಅವರು ನೀಡಿದ್ದ ಯಾವುದೇ ಹೇಳಿಕೆಗಳನ್ನು ಅಧಿಕಾರಿಗಳು ಪರಿಗಣನೆಗೆ ತೆಗೆದುಕೊಳ್ಳಬಾರದು. ಈ ವರೆಗೂ ಕರ್ಣನ್ ನೀಡಿದ್ದ ಆದೇಶಗಳೆಲ್ಲವನ್ನೂ ಅಮಾನ್ಯ ಮಾಡುತ್ತಿದ್ದೇವೆ. ಮೇ.8ರೊಳಗಾಗಿ ಕರ್ಣನ್ ಅವರು ಮಾನಸಿಕ ಆರೋಗ್ಯ ಕುರಿತಂತೆ ವರದಿ ಸಲ್ಲಿಸಬೇಕು. 
ಜೊತೆಗೆ ನ್ಯಾಯಾಂಗ ನಿಂದನೆ ಬಗ್ಗೆ ಕರ್ಣನ್ ಅವರು ಪ್ರತಿಕ್ರಿಯೆ ನೀಡಬೇಕು. ಒಂದು ವೇಳೆ ಪ್ರತಿಕ್ರಿಯೆ ನೀಡದಿದ್ದ, ಪೀಠವು ನ್ಯಾಯಾಂಗ ನಿಂದನೆಯಾಗಿ ಪರಿಗಣಿಸುತ್ತದೆ ಎಂದು ಸುಪ್ರೀಂ ಸೂಚಿಸಿದೆ. ಅಲ್ಲದೆ, ಮುಂದಿನ ವಿಚಾರಣೆಯನ್ನು ಮೇ.9ರಂದು ನಡೆಸುವುದಾಗಿ ತಿಳಿಸಿದೆ. 
ಕಳೆದ ಬಾರಿ ವಿಚಾರಣೆ ನಡೆದ ವೇಳೆ, ಪ್ರಕರಣದ ಪ್ರಾಮುಖ್ಯ ಅರಿಯುವುಷ್ಟು ಕರ್ಣನ್ ಮಾನಸಿಕವಾಗಿ ಆರೋಗ್ಯವಾಗಿದ್ದಾರಾ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೇಹರ್ ಅವರು ಪ್ರಶ್ನಿಸಿದ್ದರು. ಅಲ್ಲದೆ, ಮಾನಸಿಕ ಆರೋಗ್ಯದ ಪ್ರಮಾಣ ಪತ್ರ ಸಲ್ಲಿಸುವಂತೆ ಸೂಚಿಸಿದ್ದರು. ಕೆಲಸಕ್ಕೆ ಸಂಬಂಧಿಸಿದ ಅನಿಶ್ಚಿತತೆ ಇದೆಯಾ ಎಂದು ಕೂಡ ಪ್ರಶ್ನಿಸಿದ್ದರು. 
ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಕರ್ಣನ್ ಅವರು ನನ್ನ ಕೆಲಸ ಮತ್ತೆ ಆರಂಭಿಸುವುದಕ್ಕೆ ಅವಕಾಶ ನೀಡುವವರೆಗೂ ನ್ಯಾಯಾಲಯಕ್ಕೆ ಹಾಜರಾಗಲ್ಲ. ನಾನು ಜೈಲಿಗೆ ಹೋಗುವುದ್ಕಕೂ ಸಿದ್ಧ ಎಂದು ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT