ಹುರಿಯತ್ ನಾಯಕ ಸಯ್ಯದ್ ಅಲಿ ಶಾ ಗಿಲಾನಿ ಹಾಗೂ ಉಗ್ರ ಅಫ್ಜಲ್ ಗುರು (ಸಂಗ್ರಹ ಚಿತ್ರ) 
ದೇಶ

ಜೈಲು ಸ್ಥಳಾಂತರ ಕುರಿತು ಸಹಾಯ ಮಾಡುವಂತೆ ಗಿಲಾನಿ ಮೊರೆ ಹೋಗಿದ್ದ ಉಗ್ರ ಅಫ್ಜಲ್ ಗುರು!

2001 ಸಂಸತ್ ಮೇಲಿನ ದಾಳಿಯ ರೂವಾರಿಯಾಗಿದ್ದ ಉಗ್ರ ಅಫ್ಜಲ್ ಗುರು ದೆಹಲಿಯ ತಿಹಾರ್ ಜೈಲಿನಿಂದ ಶ್ರೀನಗರ ಜೈಲಿಗೆ ಸ್ಥಳಾಂತರಗೊಳ್ಳಲು ಸಹಾಯ ಮಾಡುವಂತೆ ಹುರಿಯತ್ ನಾಯಕ ಸಯ್ಯದ್ ಅಲಿ ಶಾ ಗಿಲಾನಿ ಮೊರೆ...

ಶ್ರೀನಗರ: 2001 ಸಂಸತ್ ಮೇಲಿನ ದಾಳಿಯ ರೂವಾರಿಯಾಗಿದ್ದ ಉಗ್ರ ಅಫ್ಜಲ್ ಗುರು ದೆಹಲಿಯ ತಿಹಾರ್ ಜೈಲಿನಿಂದ ಶ್ರೀನಗರ ಜೈಲಿಗೆ ಸ್ಥಳಾಂತರಗೊಳ್ಳಲು ಸಹಾಯ ಮಾಡುವಂತೆ ಹುರಿಯತ್ ನಾಯಕ ಸಯ್ಯದ್ ಅಲಿ ಶಾ ಗಿಲಾನಿ ಮೊರೆ ಹೋಗಿದ್ದ ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. 
ಕಾಶ್ಮೀರದಲ್ಲಿನ ಹಿಂಸಾಚಾರ ಸೃಷ್ಟಿಸಲು ಪ್ರತ್ಯೇಕತಾವಾದಿಗಳು ಪಾಕಿಸ್ತಾನದಿಂದ ಆರ್ಥಿಕ ನೆರವು ಪಡೆಯುತ್ತಿದ್ದಾರೆಂಬ ಗಂಭೀರ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಪ್ರತ್ಯೇಕತಾವಾದಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಎನ್ಐಎ ದಾಳಿ ನಡೆಸಿತ್ತು. 
ಜೂ.3 2017ರಂದು ಪ್ರತ್ಯೇಕತಾವಾದಿ ಗಿಲಾನಿಯವರ ಅಳಿಯ ಅಲ್ತಾಫ್ ಅಹ್ಮದ್ ಶಾ ಅವರ ಮನೆ ಮೇಲೆಯೂ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಅಫ್ಜಲ್ ಗುರು ಗಿಲಾನಿಯವರಿಗೆ ಬರೆದಿರುವ ಪತ್ರವೊಂದು ದೊರಕಿದೆ. 
ಪತ್ರದಲ್ಲಿ ಅಫ್ಜಲ್ ದೆಹಲಿ ತಿಹಾರ್ ಜೈಲಿನಿಂದ ಶ್ರೀನಗರ ಜೈಲಿಕೆ ಸ್ಥಳಾಂತರಗೊಳ್ಳಲು ಸಹಾಯ ಮಾಡುವಂತೆ ಕೇಳಿರುವುದು ತಿಳಿದುಬಂದಿದೆ. 
ವಿಧಾನಸಭೆಯಲ್ಲಿ ನಿರ್ಣಯ ಮಂಡಿಸುವುದು ನನಗೆ ಬೇಕಿಲ್ಲ. ವಿಧಾನಸಭೆಯಲ್ಲಿ ನಿರ್ಣಯಗಳನ್ನು ಮಂಡಿಸುವ ಬದಲಿಗೆ ಜೈಲು ಸ್ಥಳಾಂತರ ಕುರಿತು ಸುಪ್ರೀಂಕೋರ್ಟ್ ಗೆ ಪ್ರತಿಕ್ರಿಯೆ ನೀಡುವಂತೆ ಒಮರ್ ಅಬ್ದುಲ್ಲಾ (ಆಂದಿನ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ) ಅವರ ಬಳಿ ಮನವಿ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಅಫ್ಜಲ್ ಹೇಳಿದ್ದಾನೆಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT