ಮೀನಾಕ್ಷಿ ಲೇಖಿ 
ದೇಶ

ಗೋ ಮೂತ್ರ ಕಾನೂನು ಅಧಿಕಾರಿಯೊಬ್ಬರಿಗೆ ನೆರವಾಯಿತು: ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ

ಗೋ ಮೂತ್ರ ಎಷ್ಟು ಪ್ರಯೋಜನಕಾರಿಯೆಂದರೆ ಸರ್ಕಾರದ ಮಾಜಿ ಕಾನೂನು ಅಧಿಕಾರಿಯೊಬ್ಬರು ಗಂಭೀರ ಕಾಯಿಲೆಯಿಂದ ....

ನವದೆಹಲಿ: ಗೋ ಮೂತ್ರ ಎಷ್ಟು ಪ್ರಯೋಜನಕಾರಿಯೆಂದರೆ ಸರ್ಕಾರದ ಮಾಜಿ ಕಾನೂನು ಅಧಿಕಾರಿಯೊಬ್ಬರು ಗಂಭೀರ ಕಾಯಿಲೆಯಿಂದ ಗುಣಮುಖರಾಗಿದ್ದಾರೆ ಎಂದು ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ನಿನ್ನೆ ಲೋಕಸಭೆಯಲ್ಲಿ ಹೇಳಿದ್ದಾರೆ.
ಇತ್ತೀಚಿನ ವಿಧಾನಗಳನ್ನು ಬಳಸಿಕೊಂಡು ಹಸುಗಳು ಮತ್ತು ಜಾನುವಾರುಗಳಿಗೆ ಸಂಬಂಧಿಸಿದ ಪುರಾತನ ವಿಜ್ಞಾನವನ್ನು ಹರಡುವ ಬಗ್ಗೆ ಸರ್ಕಾರ ಯೋಜನೆ ಹಾಕಿಕೊಂಡಿದೆಯೇ ಎಂದು ತಿಳಿದುಕೊಳ್ಳಲು ಬಯಸುತ್ತಿರುವುದಾಗಿ ಹೇಳಿದರು.
ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಲೇಖಿ,ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಗಂಭೀರವಾಗಿ ಅನಾರೋಗ್ಯಕ್ಕೆ ಒಳಗಾಗಿದ್ದರು. ಅವರು ನಿಯಮಿತವಾಗಿ ಗೋ ಮೂತ್ರ ಸೇವಿಸಿದಾಗ ಕಾಯಿಲೆ ಗುಣಮುಖವಾಯಿತು ಎಂದರು.
ಅದಕ್ಕೆ ಪ್ರತಿಕ್ರಿಯಿಸಿದ ಲೋಕಸಭಾಧ್ಯಕ್ಷೆ ಸುಮಿತ್ರಾ ಮಹಾಜನ್, ಮದ್ದು ಎಂದರೆ ಮದ್ದು ಎಂದು ಹೇಳಿದರು.
 ಲೇಖಿ ಅವರ ಹೇಳಿಕೆಗೆ ಉತ್ತರಿಸಿದ ಕೃಷಿ ಸಚಿವ ರಾಧಾ ಮೋಹನ್ ಸಿಂಗ್, ರಾಷ್ಟ್ರೀಯ ಗೋಮಾಂಗ್ ಉತ್ಪಾದಕತೆ ಮಿಷನ್ ನಡಿಯಲ್ಲಿ  ಹರ್ಯಾಣದ ಕರ್ನಲ್ ನಲ್ಲಿ  ಜನೊಮ್ ಕೇಂದ್ರ ಸ್ಥಾಪನೆಯಾಗುತ್ತಿದೆ. ಇತ್ತೀಚಿನ ತಂತ್ರಜ್ಞಾನ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT