ಸಂಗ್ರಹ ಚಿತ್ರ 
ದೇಶ

ಪುಲ್ವಾಮ ಎನ್'ಕೌಂಟರ್ ವೇಳೆ ಕಲ್ಲುತೂರಾಟ: ಪೆಲೆಟ್ ಗನ್ ಗುಂಡಿಗೆ ಗಾಯಗೊಂಡಿದ್ದ ನಾಗರೀಕ ಸಾವು

ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿನ ಎನ್ ಕೌಂಟರ್ ನಡೆದ ಸ್ಥಳದಲ್ಲಿ ಪೆಲೆಟ್ ಗನ್ ಗುಂಡಿನ ದಾಳಿಗೆ ಗಾಯಗೊಂಡಿದ್ದ ನಾಗರೀಕ ಗುರುವಾರ ಸಾವನ್ನಪ್ಪಿದ್ದಾನೆಂದು ಪೊಲೀಸರು ಹೇಳಿದ್ದಾರೆ...

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮದಲ್ಲಿನ ಎನ್ ಕೌಂಟರ್ ನಡೆದ ಸ್ಥಳದಲ್ಲಿ ಪೆಲೆಟ್ ಗನ್ ಗುಂಡಿನ ದಾಳಿಗೆ ಗಾಯಗೊಂಡಿದ್ದ ನಾಗರೀಕ ಗುರುವಾರ ಸಾವನ್ನಪ್ಪಿದ್ದಾನೆಂದು ಪೊಲೀಸರು ಹೇಳಿದ್ದಾರೆ. 
ಅಕೀಲ್ ಅಹ್ಮದ್ ಭಟ್ ಸಾವನ್ನಪ್ಪಿದ್ದ ನಾಗರೀಕರನಾಗಿದ್ದು, ಈತ ಪುಲ್ವಾಮ ಜಿಲ್ಲೆಯ ಗಬರ್ಪೊರ ಪ್ರದೇಶದ ನಿವಾಸಿಯಾಗಿದ್ದಾನೆ. ನಿನ್ನೆ ಸೇನೆ ಎನ್ ಕೌಂಟರ್ ನಡೆಸುತ್ತಿದ್ದ ವೇಳೆ ಕೆಲ ಸ್ಥಳೀಯರು ಕಲ್ಲು ತೂರಾಟ ನಡೆಸುತ್ತಿದ್ದರು. ಈ ವೇಳೆ ಕಲ್ಲು ತೂರಾಟಗಾರರನ್ನು ಚದುರಿಸುವ ಸಲುವಾಗಿ ಸೇನಾ ಪಡೆ ಪೆಲೆಟ್ ಗನ್ ಬಳಕೆ ಮಾಡಿತ್ತು. ಸ್ಥಳದಲ್ಲಿದ್ದ ಅಕೀಲ್ ಅಹ್ಮದ್ ಭಟ್ ಗಂಭೀರವಾಗಿ ಗಾಯಗೊಂಡಿದ್ದ. 
ಗಾಯಗೊಂಡಿದ್ದ ಅಕೀಲ್ ನನ್ನು ಎಸ್'ಕೆಐಎಂಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. 
ನಿನ್ನೆ ಕೂಡ ಉಗ್ರರು ಹಾಗೂ ಯೋಧರ ನಡುವೆ ನಡೆಯುತ್ತಿದ್ದ ಗುಂಡಿನ ಚಕಮಕಿ ವೇಳೆ ಆಕಸ್ಮಿಕವಾಗಿ ಫಿರ್ದೌಸ್ ಅಹ್ಮದ್ ಎಂಬ ನಾಗರಿಕನಿಗೆ ಗುಂಡು ತಗುಲಿ ಮೃತಪಟ್ಟಿದ್ದ. 
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸುತ್ತಿರುವ ಉಗ್ರ ನಿಗ್ರಹ ಕಾರ್ಯಾಚರಣೆಗೆ ಮಂಗಳವಾರ ಮಹತ್ವದ ಯಶಸ್ಸು ದೊರೆತಿತ್ತು. ಹಲವು ವರ್ಷಗಳಿಂದ ಸೇನೆಗೆ ಚಳ್ಳೆ ಹಣ್ಣು ತಿನ್ನಿಸಿ ಯುವಕರನ್ನು ಉಗ್ರ  ಸಂಘಟನೆಗೆ ಸೆಳೆಯುತ್ತಿದ್ದ ಲಷ್ಕರ್ ಉಗ್ರ ಅಬು ದುಜಾನಾನನ್ನು ಭಾರತೀಯ ಸೇನಾ ಪಡೆ ಗುಂಡಿಟ್ಟು ಹತ್ಯೆ ಮಾಡಿತ್ತು. ಕಾಶ್ಮೀರದ ಹಕ್ರೀಪೋರಾ ಗ್ರಾಮದಲ್ಲಿ ಅಡಗಿ ಕುಳಿತಿದ್ದ ಉಗ್ರರನ್ನು ಸುತ್ತುವರೆದ ಸೇನೆ ಇಬ್ಬರೂ ಉಗ್ರರನ್ನು ಹತ್ಯೆ ಮಾಡಿತ್ತು. ಮೋಸ್ಟ್ ವಾಟೆಂಡ್ ಉಗ್ರರ ಪಟ್ಟಿಗೆ ಸೇರ್ಪಡೆಗೊಂಡಿದ್ದ ಅಬು ದುಜಾನಾನನ್ನು ಸೇನಾ ಪಡೆ ಹತ್ಯೆ ಮಾಡಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಪ್ರವಾಹದ ರೌದ್ರಾವತಾರ: ಮತ್ತೊಂದು ಜಲಪ್ರಳಯದ ಭೀತಿ; ರಕ್ಷಣಾ ಕಾರ್ಯಾಚರಣೆ ಸ್ಥಗಿತಕ್ಕೆ ಆದೇಶ, ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೈನಿಕರಿಗೆ ಸೂಚನೆ..!

2019- 2023 ರವರೆಗೆ MUDA ದಲ್ಲಿ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು: ನಿವೇಶನ ಪಡೆದವರಿಗೆ ಯತೀಂದ್ರ ಸಿದ್ದರಾಮಯ್ಯ ಶಾಕ್!

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; ‘ನೆತನ್ಯಾಹು ನರಕಕ್ಕೆ’: ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ

ಪ್ರವಾಹದ ಅಬ್ಬರಕ್ಕೆ ನೇಪಾಳ ತತ್ತರ; ಸಂಪರ್ಕಕ್ಕೆ ಸಿಗದೆ 290 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಚುರುಕು..!

ನೇಪಾಳ-ಟಿಬೆಟ್ ಗಡಿಯಲ್ಲಿ ಜಲಪ್ರಳಯ: ಸಾವಿನ ಸಂಖ್ಯೆ 472ಕ್ಕೆ ಏರಿಕೆ; 1,400ಕ್ಕೂ ಹೆಚ್ಚು ಜನ ನಾಪತ್ತೆ, ಮತ್ತೊಂದು ಪ್ರವಾಹದ ಭೀತಿ..!