ಮನೋಹರ್ ಪರಿಕ್ಕರ್ 
ದೇಶ

ಮಹಾದಾಯಿ ವಿವಾದ: ಕರ್ನಾಟಕ ಪರಿಸರದ ಮೇಲೆ ಬಾಂಬ್ ಹಾಕುತ್ತಿದೆ ಎಂದ ಗೋವಾ ಸಿಎಂ

ನೆರೆಯ ರಾಜ್ಯಗಳೊಂದಿಗಿನ ಮಹಾದಾಯಿ ವಿವಾದವನ್ನು ಪಕ್ಷದ ಮೂಲಕ ಪರಿಹರಿಸಿಕೊಳ್ಳಲು ಸಾಧ್ಯವಿಲ್ಲ ಎಂದಿರುವ ಗೋವಾ....

ಪಣಜಿ: ನೆರೆಯ ರಾಜ್ಯಗಳೊಂದಿಗಿನ ಮಹಾದಾಯಿ ವಿವಾದವನ್ನು ಪಕ್ಷದ ಮೂಲಕ ಪರಿಹರಿಸಿಕೊಳ್ಳಲು ಸಾಧ್ಯವಿಲ್ಲ ಎಂದಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು, ಕರ್ನಾಟಕ ಮಹಾದಾಯಿ ನದಿಗೆ ಡ್ಯಾಮ್ ಗಳನ್ನು ನಿರ್ಮಿಸುವ ಮೂಲಕ ಪರಿಸರದ ಮೇಲೆ ಬಾಂಬ್ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.
ಗೋವಾ, ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಮಹಾದಾಯಿ ನದಿ ವಿವಾದದ ಕುರಿತು ಇಂದು ವಿಧಾಸಭೆಯಲ್ಲಿ ಮಾತನಾಡಿದ ಗೋವಾ ಸಿಎಂ, ನದಿ ನೀರಿನ ವಿವಾದವನ್ನು ನಿಭಾಯಿಸಲು ರಾಜ್ಯ ಸರ್ಕಾರ ಕೆಲವು ಕಾರ್ಯತಂತ್ರಗಳನ್ನು ಹೊಂದಿದೆ ಎಂದು ಹೇಳಿದರು.
ಪಣಜಿ ಬಳಿ ಅರೇಬಿಯನ್ ಸಮುದ್ರ ಸೇರುವ ಮಹಾದಾಯಿ ನದಿ ಅಣೆಕಟ್ಟು ನಿರ್ಮಿಸಲು ಕರ್ನಾಟಕ ಮತ್ತು ಮಹಾರಾಷ್ಟ್ರ ಯೋಜನೆ ಸಿದ್ಧಪಡಿಸಿವೆ. ಆದರೆ ಇದಕ್ಕೆ ಗೋವಾ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಇದರಿಂದ ರಾಜ್ಯದ ಕರಾವಳಿಯ ಪರಿಸರಕ್ಕೆ ಹಾನಿಯಾಗಲಿದೆ ಎಂದು ಗೋವಾ ಸಿಎಂ ಸದನಕ್ಕೆ ತಿಳಿಸಿದರು.
ಕರ್ನಾಟಕ ಮಹಾದಾಯಿ ನದಿ ನೀರನ್ನು ಮಲಪ್ರಭಾ ನದಿಗೆ ತಿರುಗಿಸುವ ಮೂಲಕ ಕನಿಷ್ಟ ಏಳು ಅಣೆಕಟ್ಟುಗಳು ಮತ್ತು ಮೂರು ಜಲವಿದ್ಯುತ್ ಯೋಜನೆಗಳನ್ನು ನಿರ್ಮಿಸಲು ಯೋಜನೆ ರೂಪಿಸಿದೆ ಎಂದು ಪರಿಕ್ಕರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT