ಸುಪ್ರೀಂ ಕೋರ್ಟ್ 
ದೇಶ

ಖಾಸಗಿ ಮಾಹಿತಿಗಳನ್ನು ರಕ್ಷಿಸಲು ಸಮಗ್ರ ಮಾರ್ಗದರ್ಶಿ ಸೂತ್ರಗಳು ಅಗತ್ಯ: ಸುಪ್ರೀಂ ಕೋರ್ಟ್

ಜನಸಾಮಾನ್ಯರ ಖಾಸಗಿ ಮಾಹಿತಿಗಳನ್ನು ನಿರ್ದಿಷ್ಟ ಉದ್ದೇಶಗಳಿಗೆ ಬಳಸಿಕೊಳ್ಳುವಾಗ ಅವುಗಳನ್ನು...

ನವದೆಹಲಿ: ಜನಸಾಮಾನ್ಯರ ಖಾಸಗಿ ಮಾಹಿತಿಗಳನ್ನು ನಿರ್ದಿಷ್ಟ ಉದ್ದೇಶಗಳಿಗೆ ಬಳಸಿಕೊಳ್ಳುವಾಗ ಅವುಗಳನ್ನು  ರಕ್ಷಿಸಿಕೊಳ್ಳಲು ಸಮಗ್ರ ಮಾರ್ಗದರ್ಶಿ ಸೂತ್ರಗಳ  ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಜನಸಾಮಾನ್ಯರ ಖಾಸಗಿ ಮಾಹಿತಿಗಳನ್ನು ಗೌಪ್ಯವಾಗಿ ಕಾಪಾಡುವುದು ಮೂಲಭೂತ ಹಕ್ಕೇ ಎಂಬಂತಹ ವಿವಾದಾಸ್ಪದ ವಿಷಯಗಳ ಕುರಿತು ವಿಚಾರಣೆ ನಡೆಸಿದ  ಒಂಭತ್ತು ಮಂದಿ ನ್ಯಾಯಾಧೀಶರನ್ನೊಳಗೊಂಡ ಸಂವಿಧಾನ ಪೀಠ, ಗುಜರಾತ್ ಸರ್ಕಾರದ ವಕೀಲರ ಮನವಿಯನ್ನು ತಿರಸ್ಕರಿಸಿತು. ಜನರ ಖಾಸಗಿ ಮಾಹಿತಿಗಳನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿರುವುದರಿಂದ ಅವುಗಳ ರಕ್ಷಣೆಗೆ ಸಮಗ್ರ ಮಾರ್ಗದರ್ಶಿ ಸೂತ್ರಗಳ ಅವಶ್ಯಕತೆಯಿದೆ ಎಂದು ಹೇಳಿದೆ.
 ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೆಹರ್ ಅವರನ್ನೊಳಗೊಂಡ ನ್ಯಾಯಪೀಠ, ಭಾರತ 1948ರ ಅಂತರರಾಷ್ಟ್ರೀಯ ಅಧಿವೇಶನಕ್ಕೆ ಸಹಿ ಹಾಕಿದ್ದು, ಅದರಲ್ಲಿ ಗೌಪ್ಯತೆಯನ್ನು ಕಾಪಾಡುವುದು ಮಾನವ ಹಕ್ಕು ಎಂದು ಹೇಳಲಾಗಿದೆ ಎಂದು ಉಲ್ಲೇಖಿಸಿದೆ.
1948ರಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಮಾಡಿಕೊಂಡ ಜನಸಾಮಾನ್ಯರ ಖಾಸಗಿ ಮಾಹಿತಿಗಳನ್ನು ರಕ್ಷಿಸಿಕೊಳ್ಳುವುದು ಮೂಲಭೂತ ಹಕ್ಕು ಎಂದು ಸಹಿ ಮಾಡಿಕೊಂಡಿರುವಾಗ ಮತ್ತು ಇದೀಗ ನಿರ್ದಿಷ್ಟ ಉದ್ದೇಶಗಳಿಗೆ ಮಾಹಿತಿಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸುವಾಗ ಅದನ್ನು ಹೇಗೆ ನಿಭಾಯಿಸುತ್ತೀರಿ ಎಂದು ಮಹಾರಾಷ್ಟ್ರ ಸರ್ಕಾರ ಮುಂದಿಟ್ಟ ಪ್ರಶ್ನೆಯನ್ನು ಕೋರ್ಟ್ ಉಲ್ಲೇಖಿಸಿತು.

ಇಂತಹ ಸಂದರ್ಭದಲ್ಲಿ ವ್ಯಕ್ತಿಗಳ ಖಾಸಗಿ ಮಾಹಿತಿಗಳನ್ನು ನಿರ್ದಿಷ್ಟ ಉದ್ದೇಶಗಳಿಗೆ ಮಾತ್ರ ಬಳಸಿಕೊಳ್ಳಬಹುದಾಗಿದ್ದು ಅದಕ್ಕೆ ಸಮಗ್ರ ಮಾರ್ಗದರ್ಶಿ ಸೂತ್ರದ ಅಗತ್ಯವಿದೆ ಎಂದು ನ್ಯಾಯಾಲಯ ಒತ್ತಿ ಹೇಳಿತು.

ಒಬ್ಬ ವ್ಯಕ್ತಿಯ ಹೆಸರು, ಪೋಷಕರ ಹೆಸರು, ದೂರವಾಣಿ ಸಂಖ್ಯೆ ಸಾರ್ವಜನಿಕವಾಗಿ ಸಿಗುತ್ತದೆಯೆಂದರೆ ಅದನ್ನು ನಿರ್ದಿಷ್ಟ ಉದ್ದೇಶಗಳಿಗೆ ಮಾತ್ರ ಬಳಸಿಕೊಳ್ಳುತ್ತಾರೆಯೇ ಇಲ್ಲವೇ ಎಂದು ಪರೀಕ್ಷಿಸುವುದು ಕಷ್ಟವಾಗುತ್ತದೆ. ಅಂತಹ ಸಂದರ್ಭದಲ್ಲಿ ಅವುಗಳನ್ನು ನಿಭಾಯಿಸಲು ಸಮಗ್ರ ಮಾರ್ಗದರ್ಶಿ ಸೂತ್ರಗಳ ಅಗತ್ಯವಿದೆ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT