ಸುಷ್ಮಾ ಸ್ವರಾಜ್ 
ದೇಶ

ಚೀನಾ ಗಡಿ ಸಮಸ್ಯೆಗೆ ಯುದ್ಧ ಪರಿಹಾರ ಅಲ್ಲ; ಪರಸ್ಪರ ಮಾತುಕತೆಯೇ ಮದ್ದು: ಸುಷ್ಮಾ ಸ್ವರಾಜ್

ಚೀನಾ ಗಡಿ ಸಮಸ್ಯೆಗೆ ಯುದ್ಧ ಪರಿಹಾರವಲ್ಲ. ರಾಜತಾಂತ್ರಿಕ ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬೇಕಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್...

ನವದೆಹಲಿ: ಚೀನಾ ಗಡಿ ಸಮಸ್ಯೆಗೆ ಯುದ್ಧ ಪರಿಹಾರವಲ್ಲ. ರಾಜತಾಂತ್ರಿಕ ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳಬೇಕಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. 
ಡೋಕ್ಲಾಂ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಮಾತನಾಡಿದ ಸುಷ್ಮಾ ಸ್ವರಾಜ್ ಅವರು, ಯಾವುದೇ ಸಮಸ್ಯೆಗಳನ್ನು ನಿವಾರಿಸಲು ತಾಳ್ಮೆ ಮುಖ್ಯವಾಗಿದ್ದು, ಒಂದು ವೇಳೆ ತಾಳ್ಮೆ ಕಳೆದುಕೊಂಡರೆ ಇನ್ನೊಂದು ಕಡೆಯಿಂದ ಪ್ರಚೋದನಾತ್ಮಕ ನಡೆ ಉಂಟಾಗಬಹುದು. ಹೀಗಾಗಿ ತಾಳ್ಮೆ ಮೂಲಕ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುತ್ತಿದೆ ಎಂದರು. 
ಡೋಕ್ಲಾಂ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ನಡೆದ ಚರ್ಚೆ ವೇಳೆ ಸದಸ್ಯರೊಬ್ಬರು ಭಾರತದ ವಿದೇಶಿ ನೀತಿ ಮತ್ತು ಕಾರ್ಯತಂತ್ರದ ಕುರಿತು ಧ್ವನಿ ಎತ್ತಿದ್ದು ಇದಕ್ಕೆ ಉತ್ತರಿಸಿದ ಸುಷ್ಮಾ ಸ್ವರಾಜ್ ಅವರು ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ನಾವು ಚೀನಾದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುತ್ತಿದೆ ಎಂದರು. 
ಚೀನಾ ಗಡಿಯಲ್ಲಿ ಯುದ್ಧದ ಕಾರ್ಮೋಡ ಇರುವುದರಿಂದ ಮಿಲಿಟರಿ ಸಿದ್ಧತೆಗಳು ನಡೆಯುತ್ತಿದೆ. ಆದರೆ ಯುದ್ಧದಿಂದಾಗಿ ಸಮಸ್ಯೆ ಪರಿಹರಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ರಾಜತಾಂತ್ರಿಕ ಮಾತುಕತೆ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುತ್ತಿದೆ. ಸಮಸ್ಯೆ ಪರಿಹಾರವಾಗಬಹುದೆಂಬ ವಿಶ್ವಾಸವನ್ನು ಎಂದು ಸುಷ್ಮಾ ಸ್ವರಾಜ್ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT