ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ 
ದೇಶ

ಶಶಿಕಲಾ ಸೂಚನೆಯಂತೆ ರಾಜ್ಯದಲ್ಲಿ ಆಡಳಿತ: ಸಿಎಂ ಪಳನಿಸ್ವಾಮಿ ಸೇರಿ 4 ಸಚಿವರಿಗೆ ನೋಟಿಸ್

ಎಐಎಡಿಎಂಕೆ ಕಾರ್ಯಕರ್ತರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಸೇರಿ ನಾಲ್ಕು ಸಚಿವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ...

ಚೆನ್ನೈ: ಎಐಎಡಿಎಂಕೆ ಕಾರ್ಯಕರ್ತರು  ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಸೇರಿ ನಾಲ್ಕು ಸಚಿವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ. ವಿ.ಕೆ. ಶಶಿಕಲಾ ಅವರ ಸೂಚನೆಯಂತೆ ತಮಿಳುನಾಡು ರಾಜ್ಯದಲ್ಲಿ ಆಡಳಿತ ನಡೆಸಲಾಗುತ್ತಿದೆ ಎಂದು ಹೇಳಿ ಈ ಹಿಂದೆ ಎಐಎಡಿಎಂಕೆ ಮಾಜಿ ಶಾಸಕ ಆರ್. ತಮರೈಕನಿ ಅವರ ಪುತ್ರ ಟಿ. ಅನಲಂಗನ್ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ದಾಖಲಿಸಿದ್ದರು. 
ಅರಣ್ಯ ಸಚಿವ ದಿಂಡುಕ್ಕಲ್ ಸಿ. ಶ್ರೀನಿವಾಸನ್, ಶಿಕ್ಷಣ ಸಚಿವ ಕೆ.ಎ. ಸೆಂಗೋಟ್ಟೈಯಾನ್, ಸಹಕಾರ ಸಚಿವ 'ಸೆಲ್ಲೂರ್' ಕೆ. ರಾಜು ಮತ್ತು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಆರ್. ಕಾಮರಾಜ್ ಅವರು ಕಳೆದ ಫೆ.28 ರಂದು ಜೈಲಿನಲ್ಲಿರುವ ಶಶಿಕಲಾ ಅವರನ್ನು ಭೇಟಿ ಮಾಡಿದ್ದರು. ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯ ಸರ್ಕಾರದ ಆಡಳಿತ ಕುರಿತಂತೆ ಶಶಿಕಲಾ ಅವರೊಂದಿಗೆ ಚರ್ಚೆ ನಡೆಸಿದ್ದೇವೆಂದು ಹೇಳಿದ್ದರು. 
ಶಶಿಕಲಾ ಅವರ ಸೂಚನೆಯಂತೆ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಸಚಿವರು ಆಡಳಿತ ನಡೆಸುತ್ತಿದ್ದು, ಮುಖ್ಯಮಂತ್ರಿಗಳು, ಸಚಿವರು ಹಾಗೂ ರಾಜ್ಯಪಾಲರ ಅನರ್ಹತೆ ಕುರಿತಂತೆ ಸ್ಪೀಕರ್ ಹಾಗೂ ವಿಧಾನಸಭಾ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಅನಲಂಗನ್ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಸೇರಿ ನಾಲ್ಕು ಸಚಿವರಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel