ನವದೆಹಲಿ: ಗುರುತಿನ ವಂಚನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮರಣ ನೋಂದಣಿಗೂ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸಿದ್ದು, ಅಕ್ಟೋಬರ್ 1 ರಿಂದ ಈ ನಿಯಮ ಜಾರಿಗೆ ಬರಲಿದೆ.
ಕೇಂದ್ರ ಗೃಹ ಇಲಾಖೆ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಜಮ್ಮು-ಕಾಶ್ಮೀರ, ಅಸ್ಸಾಂ, ಮೇಘಾಲಯ ರಾಜ್ಯಗಳನ್ನು ಹೊರತುಪಡಿಸಿ ಅಕ್ಟೋಬರ್ 1 ರಿಂದ ಎಲ್ಲಾ ರಾಜ್ಯಗಳಲ್ಲೂ ನಿಯಮ ಅನ್ವಯವಾಗಲಿದೆ ಎಂದು ಹೇಳಿದೆ.ಜಮ್ಮು-ಕಾಶ್ಮೀರ, ಅಸ್ಸಾಂ, ಮೇಘಾಲಯ ರಾಜ್ಯಗಳಿಗೆ ಪ್ರತ್ಯೇಕ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಗೃಹ ಇಲಾಖೆ ತಿಳಿಸಿದೆ.
ನಿಧನರಾದ ವ್ಯಕ್ತಿಯ ಗುರುತನ್ನು ದಾಖಲಿಸುವುದಕ್ಕಾಗಿ ಆಧಾರ್ ಸಂಖ್ಯೆಯನ್ನು ಮರಣ ನೋಂದಣಿಗೂ ಕಡ್ಡಾಯಗೊಳಿಸಲಾಗಿದ್ದು, ಅಕ್ಟೋಬರ್ 1 ರಿಂದ ಜಾರಿಗೆ ಬರಲಿದೆ ಎಂದು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರದ ಈ ಹೊಸ ಕ್ರಮದಿಂದ ಗುರುತಿನ ವಂಚನೆಯನ್ನು ತಡೆಗಟ್ಟಲು ಸಾಧ್ಯವಿದ್ದು ಸಾವನ್ನಪ್ಪಿರುವ ವ್ಯಕ್ತಿಯ ಗುರುತನ್ನು ಸಾಬೀತುಪಡಿಸುವುದಕ್ಕೆ ಹಲವು ದಾಖಲೆಗಳನ್ನು ಒದಗಿಸುವ ಪ್ರಕ್ರಿಯೆಗಳೂ ಅಗತ್ಯವಿರುವುದಿಲ್ಲ ಎಂದು ಹೇಳಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos