ದೇಶ

ಸದನಕ್ಕೆ ತಪ್ಪು ಮಾಹಿತಿ: ವಿಪಕ್ಷಗಳಿಂದ ಸುಷ್ಮಾ ಸ್ವರಾಜ್ ವಿರುದ್ಧ ನಿಲುವಳಿ ಸೂಚನೆ ಮಂಡನೆ

ವಿದೇಶಾಂಗ ನೀತಿಯ ಬಗ್ಗೆ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಿರೋಧ ಪಕ್ಷಗಳು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ವಿರುದ್ಧ...

ನವದೆಹಲಿ: ವಿದೇಶಾಂಗ ನೀತಿಯ ಬಗ್ಗೆ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಿರೋಧ ಪಕ್ಷಗಳು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ವಿರುದ್ಧ ಶುಕ್ರವಾರ ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿವೆ. 
ಪ್ರಧಾನಿ ನರೇಂದ್ರ ಮೋದಿಯವರ ಲಾಹೋರ್ ಭೇಟಿ ಕುರಿತು ತಪ್ಪು ಮಾಹಿತಿ ನೀಡಿದ್ದಾರೆಂದು ವಿರೋಧ ಪಕ್ಷಗಳು ಆರೋಪ ಮಾಡಿವೆ. ಮೋದಿ ಲಾಹೋರ್ ಭೇಟಿಯ ನಂತರ ಭಾರತದಲ್ಲಿ ಯಾವುದೇ ಭಯೋತ್ಪಾದಕ ದಾಳಿಗಳು ನಡೆದಿಲ್ಲ ಎಂದು ಸದನಕ್ಕೆ ಮಾಹಿತಿ ನೀಡಲಾಗಿತ್ತು. ಆದರೆ ಪ್ರಧಾನಿ ಲಾಹೋರ್ ಭೇಟಿ ನೀಡಿದ ಕೆಲ ದಿನಗಳಲ್ಲಿ ಪಠಾಣ್ ಕೋಟ್ ಸೇನಾನೆಲೆ ಮೇಲೆ ಉಗ್ರರು ದಾಳಿ ನಡೆಸಿದ್ದರು. ಅಲ್ಲದೆ ಇದೇ ರೀತಿ ಐದು ಉಗ್ರ ದಾಳಿಗಳು ಭಾರತದಲ್ಲಿ ನಡೆದಿದ್ದವು ಎಂದು ವಿಪಕ್ಷಗಳು ಆರೋಪಿಸಿದ್ದವು. 
ಈ ನಡುವೆ ವಿರೋಧ ಪಕ್ಷಗಳ ಆರೋಪವನ್ನು ತಳ್ಳಿ ಹಾಕಿರುವ ಸುಷ್ಮಾ ಸ್ವರಾಜ್ ಅವರು, ನಾನು ಬ್ಯಾಂಬರ್ಗ್ ಏಷ್ಯಾ ಆಫ್ರಿಕಾ ಸಂಬಂಧಗಳ ಸಮಾವೇಶದ ವೇಳೆ ಯಾವುದೇ ರೀತಿಯ ಹೇಳಿಕೆಯನ್ನು ನೀಡಿಲ್ಲ. ವಿರೋಧ ಪಕ್ಷಗಳು ಉದ್ದೇಶಿತ ಕೆಲ ವಿಡಿಯೋಗಳನ್ನು ತೆಗೆದುಕೊಂಡು ಅದನ್ನೇ ಸಾಕ್ಷ್ಯಾಧಾರವೆಂಬಂತೆ ತೋರಿಸುತ್ತಿವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT