ದೇಶ

ಸದನಕ್ಕೆ ತಪ್ಪು ಮಾಹಿತಿ: ವಿಪಕ್ಷಗಳಿಂದ ಸುಷ್ಮಾ ಸ್ವರಾಜ್ ವಿರುದ್ಧ ನಿಲುವಳಿ ಸೂಚನೆ ಮಂಡನೆ

ವಿದೇಶಾಂಗ ನೀತಿಯ ಬಗ್ಗೆ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಿರೋಧ ಪಕ್ಷಗಳು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ವಿರುದ್ಧ...

ನವದೆಹಲಿ: ವಿದೇಶಾಂಗ ನೀತಿಯ ಬಗ್ಗೆ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಿರೋಧ ಪಕ್ಷಗಳು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ವಿರುದ್ಧ ಶುಕ್ರವಾರ ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿವೆ. 
ಪ್ರಧಾನಿ ನರೇಂದ್ರ ಮೋದಿಯವರ ಲಾಹೋರ್ ಭೇಟಿ ಕುರಿತು ತಪ್ಪು ಮಾಹಿತಿ ನೀಡಿದ್ದಾರೆಂದು ವಿರೋಧ ಪಕ್ಷಗಳು ಆರೋಪ ಮಾಡಿವೆ. ಮೋದಿ ಲಾಹೋರ್ ಭೇಟಿಯ ನಂತರ ಭಾರತದಲ್ಲಿ ಯಾವುದೇ ಭಯೋತ್ಪಾದಕ ದಾಳಿಗಳು ನಡೆದಿಲ್ಲ ಎಂದು ಸದನಕ್ಕೆ ಮಾಹಿತಿ ನೀಡಲಾಗಿತ್ತು. ಆದರೆ ಪ್ರಧಾನಿ ಲಾಹೋರ್ ಭೇಟಿ ನೀಡಿದ ಕೆಲ ದಿನಗಳಲ್ಲಿ ಪಠಾಣ್ ಕೋಟ್ ಸೇನಾನೆಲೆ ಮೇಲೆ ಉಗ್ರರು ದಾಳಿ ನಡೆಸಿದ್ದರು. ಅಲ್ಲದೆ ಇದೇ ರೀತಿ ಐದು ಉಗ್ರ ದಾಳಿಗಳು ಭಾರತದಲ್ಲಿ ನಡೆದಿದ್ದವು ಎಂದು ವಿಪಕ್ಷಗಳು ಆರೋಪಿಸಿದ್ದವು. 
ಈ ನಡುವೆ ವಿರೋಧ ಪಕ್ಷಗಳ ಆರೋಪವನ್ನು ತಳ್ಳಿ ಹಾಕಿರುವ ಸುಷ್ಮಾ ಸ್ವರಾಜ್ ಅವರು, ನಾನು ಬ್ಯಾಂಬರ್ಗ್ ಏಷ್ಯಾ ಆಫ್ರಿಕಾ ಸಂಬಂಧಗಳ ಸಮಾವೇಶದ ವೇಳೆ ಯಾವುದೇ ರೀತಿಯ ಹೇಳಿಕೆಯನ್ನು ನೀಡಿಲ್ಲ. ವಿರೋಧ ಪಕ್ಷಗಳು ಉದ್ದೇಶಿತ ಕೆಲ ವಿಡಿಯೋಗಳನ್ನು ತೆಗೆದುಕೊಂಡು ಅದನ್ನೇ ಸಾಕ್ಷ್ಯಾಧಾರವೆಂಬಂತೆ ತೋರಿಸುತ್ತಿವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo: ಬರೊಬ್ಬರಿ 200 ವಿಮಾನಗಳ ಹಾರಾಟ ರದ್ದು, 'ಮುಚ್ಕೊಂಡ್ ಮನೆಗೆ ಹೋಗಿ..' 'crew shortage'ಗೆ ಪ್ರಯಾಣಿಕರ ಆಕ್ರೋಶ!

2nd ODI: ಭಾರತಕ್ಕೆ ಆಘಾತ ನೀಡಿದ ದಕ್ಷಿಣ ಆಫ್ರಿಕಾ, ಬೃಹತ್ ರನ್ ಚೇಸ್ ಮಾಡಿ ದಾಖಲೆ! ಸರಣಿ ಸಮಬಲ

Video: 'ಭಾರತ ಛಿದ್ರ ಛಿದ್ರ ಆದ್ರೇನೆ ಬಾಂಗ್ಲಾದೇಶದಲ್ಲಿ ಶಾಂತಿ'; ಮಾಜಿ ಸೇನಾ ಮುಖ್ಯಸ್ಥನ ಪ್ರಚೋದನಾ ಹೇಳಿಕೆ

ರೀಲ್ಸ್ ಮಾಡಲು ಗಂಟೆಗೆ 140 ಕಿ.ಮೀ ವೇಗದಲ್ಲಿ KTM ಬೈಕ್ ಚಾಲನೆ; ತಲೆ ತುಂಡಾಗಿ 'ಪಿಕೆಆರ್ ಬ್ಲಾಗರ್' ಸಾವು, Video!

ಸಂಚಾರ್ ಸಾಥಿ ಆ್ಯಪ್ ನಿಂದ Snooping ಅಸಾಧ್ಯ; ಪ್ರೀ-ಇನ್ಸ್ಟಾಲ್ ಕಡ್ಡಾಯ ಆದೇಶ ವಾಪಸ್: ಸಚಿವ ಸಿಂಧಿಯಾ; Video

SCROLL FOR NEXT