ದೇಶ

ಸದನಕ್ಕೆ ತಪ್ಪು ಮಾಹಿತಿ: ವಿಪಕ್ಷಗಳಿಂದ ಸುಷ್ಮಾ ಸ್ವರಾಜ್ ವಿರುದ್ಧ ನಿಲುವಳಿ ಸೂಚನೆ ಮಂಡನೆ

ವಿದೇಶಾಂಗ ನೀತಿಯ ಬಗ್ಗೆ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಿರೋಧ ಪಕ್ಷಗಳು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ವಿರುದ್ಧ...

ನವದೆಹಲಿ: ವಿದೇಶಾಂಗ ನೀತಿಯ ಬಗ್ಗೆ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಿರೋಧ ಪಕ್ಷಗಳು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ವಿರುದ್ಧ ಶುಕ್ರವಾರ ರಾಜ್ಯಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿವೆ. 
ಪ್ರಧಾನಿ ನರೇಂದ್ರ ಮೋದಿಯವರ ಲಾಹೋರ್ ಭೇಟಿ ಕುರಿತು ತಪ್ಪು ಮಾಹಿತಿ ನೀಡಿದ್ದಾರೆಂದು ವಿರೋಧ ಪಕ್ಷಗಳು ಆರೋಪ ಮಾಡಿವೆ. ಮೋದಿ ಲಾಹೋರ್ ಭೇಟಿಯ ನಂತರ ಭಾರತದಲ್ಲಿ ಯಾವುದೇ ಭಯೋತ್ಪಾದಕ ದಾಳಿಗಳು ನಡೆದಿಲ್ಲ ಎಂದು ಸದನಕ್ಕೆ ಮಾಹಿತಿ ನೀಡಲಾಗಿತ್ತು. ಆದರೆ ಪ್ರಧಾನಿ ಲಾಹೋರ್ ಭೇಟಿ ನೀಡಿದ ಕೆಲ ದಿನಗಳಲ್ಲಿ ಪಠಾಣ್ ಕೋಟ್ ಸೇನಾನೆಲೆ ಮೇಲೆ ಉಗ್ರರು ದಾಳಿ ನಡೆಸಿದ್ದರು. ಅಲ್ಲದೆ ಇದೇ ರೀತಿ ಐದು ಉಗ್ರ ದಾಳಿಗಳು ಭಾರತದಲ್ಲಿ ನಡೆದಿದ್ದವು ಎಂದು ವಿಪಕ್ಷಗಳು ಆರೋಪಿಸಿದ್ದವು. 
ಈ ನಡುವೆ ವಿರೋಧ ಪಕ್ಷಗಳ ಆರೋಪವನ್ನು ತಳ್ಳಿ ಹಾಕಿರುವ ಸುಷ್ಮಾ ಸ್ವರಾಜ್ ಅವರು, ನಾನು ಬ್ಯಾಂಬರ್ಗ್ ಏಷ್ಯಾ ಆಫ್ರಿಕಾ ಸಂಬಂಧಗಳ ಸಮಾವೇಶದ ವೇಳೆ ಯಾವುದೇ ರೀತಿಯ ಹೇಳಿಕೆಯನ್ನು ನೀಡಿಲ್ಲ. ವಿರೋಧ ಪಕ್ಷಗಳು ಉದ್ದೇಶಿತ ಕೆಲ ವಿಡಿಯೋಗಳನ್ನು ತೆಗೆದುಕೊಂಡು ಅದನ್ನೇ ಸಾಕ್ಷ್ಯಾಧಾರವೆಂಬಂತೆ ತೋರಿಸುತ್ತಿವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ ಏರಿದ ಇಂಧನ ದರ: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಹೆಚ್ಚಳ; 2 ವಾರಗಳಲ್ಲಿ ರೂ. 7.5 ಏರಿಕೆ, ತೈಲ ಕಂಪನಿಗಳಿಂದ ವಾಹನ ಸವಾರರಿಗೆ ಮತ್ತೆ ಶಾಕ್..!

ನಿತಿನ್ ನಬೀನ್ ಭೇಟಿ ಬಳಿಕ BJP ನಾಯಕತ್ವ ಚರ್ಚೆ ಮತ್ತೆ ಮುನ್ನೆಲೆಗೆ: ವಿಜಯೇಂದ್ರ ಭವಿಷ್ಯ ಕುರಿತು ಹೆಚ್ಚಿದ ಕುತೂಹಲ; ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪೈಪೋಟಿ ತೀವ್ರ..!

ಬೆಂಗಳೂರು ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ಗಳೇ ಕಾರಣ? ‘Heat island’ ಪರಿಣಾಮ ಕುರಿತು ತಜ್ಞರ ಗಂಭೀರ ಎಚ್ಚರಿಕೆ..!

SIR ಹೆಸರಿನಲ್ಲಿ ಮತದಾರರ ಹೆಸರು ಡಿಲೀಟ್ ಆರೋಪ; war room ಸ್ಥಾಪಿಸಿದ ಕಾಂಗ್ರೆಸ್, ಎಚ್ಚರ ವಹಿಸುವಂತೆ 'ಕೈ' ನಾಯಕರಿಗೆ ಸಿದ್ದು-ಡಿಕೆಶಿ ಸೂಚನೆ

ಕೇದಾರನಾಥಕ್ಕೆ ಹೋಗ್ತಿದ್ದೀರಾ? ಹಾಗಾದ್ರೆ ದೇವಸ್ಥಾನದ ಹಿಂಭಾಗದಲ್ಲಿರುವ ಈ ಅದ್ಭುತ ಜಾಗಗಳನ್ನ ಮಿಸ್ ಮಾಡ್ಬೇಡಿ..!

SCROLL FOR NEXT