ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ 
ದೇಶ

ಸಚಿವೆ ಸುಷ್ಮಾ ಸ್ವರಾಜ್ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ಮುಂದಾದ ವಿಪಕ್ಷಗಳು

ವಿದೇಶಾಂಗ ನೀತಿಯ ಬಗ್ಗೆ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಿರೋಧ ಪಕ್ಷಗಳು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ವಿರುದ್ಧ ಶುಕ್ರವಾರ ರಾಜ್ಯಸಭೆಯಲ್ಲಿ ಹಕ್ಕುಚ್ಯುತಿ ನಿರ್ಣಯ ಮಂಡಿಸಲಿವೆ...

ನವದೆಹಲಿ: ವಿದೇಶಾಂಗ ನೀತಿಯ ಬಗ್ಗೆ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಿರೋಧ ಪಕ್ಷಗಳು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ವಿರುದ್ಧ ಶುಕ್ರವಾರ ರಾಜ್ಯಸಭೆಯಲ್ಲಿ ಹಕ್ಕುಚ್ಯುತಿ ನಿರ್ಣಯ ಮಂಡಿಸಲಿವೆ. 
ಬ್ಯಾಂಬರ್ಗ್ ಏಷ್ಯಾ ಆಫ್ರಿಕಾ ಸಂಬಂಧಗಳ ಸಮಾವೇಶದ ವೇಳೆ ಮತ್ತು 2015ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಲಾಹೋರ್ ಭೇಟಿ ಕುರಿತು ತಪ್ಪು ಮಾಹಿತಿ ನೀಡಿದ್ದಾರೆಂದು ವಿರೋಧ ಪಕ್ಷಗಳು ಆರೋಪಿ ಮಾಡಿವೆ. 
ಈ ನಡುವೆ ವಿರೋಧ ಪಕ್ಷಗಳ ಆರೋಪವನ್ನು ತಳ್ಳಿ ಹಾಕಿರುವ ಸುಷ್ಮಾ ಸ್ವರಾಜ್ ಅವರು, ನಾನು ಬ್ಯಾಂಬರ್ಗ್ ಏಷ್ಯಾ ಆಫ್ರಿಕಾ ಸಂಬಂಧಗಳ ಸಮಾವೇಶದ ವೇಳೆ ಯಾವುದೇ ರೀತಿಯ ಹೇಳಿಕೆಯನ್ನು ನೀಡಿಲ್ಲ. ವಿರೋಧ ಪಕ್ಷಗಳು ಉದ್ದೇಶಿತ ಕೆಲ ವಿಡಿಯೋಗಳನ್ನು ತೆಗೆದುಕೊಂಡು ಅದನ್ನೇ ಸಾಕ್ಷ್ಯಾಧಾರವೆಂಬಂತೆ ತೋರಿಸುತ್ತಿವೆ ಎಂದಿದ್ದಾರೆ. 

ಇದರಂತೆ ಮೋದಿ ಲಾಹೋರ್ ಭೇಟಿ ಕುರಿತಂತಿರುವ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಅವರು, ಮೋದಿ ಲಾಹೋರ್ ಭೇಟಿ ಬಳಿಂಕ ಅಂತಹ ಯಾವುದೇ ರೀತಿಯ ಉಗ್ರ ದಾಳಿ ಘಟನೆಗಳು ನಡೆದಿಲ್ಲ ಎಂದಿದ್ದಾರೆ. 

ಸುಷ್ಮಾಸ್ವರಾಜ್ ಅವರು ಹೇಳಿಕೆ ನೀಡುತ್ತಿದ್ದಂತೆಯೇ ಕಿಡಿಕಾಡಿರುವ ವಿರೋಧ ಪಕ್ಷಗಳ ನಾಯಕರು, ಮೋದಿ ಲಾಹೋರ್ ಗೆ ಭೇಟಿ ನೀಡಿದ ಕೆಲವೇ ದಿನಗಳಲ್ಲಿ ಪಠಾಣ್ ಕೋಟ್ ಸೇನಾನೆಲೆ ಮೇಲೆ ಉಗ್ರರು ದಾಳಿ ನಡೆಸಿದ್ದರು. ಇದಲ್ಲದೆ, ಇದೇ ರೀತಿಯ 5 ಉಗ್ರರ ದಾಳಿ ನಡೆದಿದ್ದವು ಎಂದಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT