ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ 
ದೇಶ

ಸಚಿವೆ ಸುಷ್ಮಾ ಸ್ವರಾಜ್ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ಮುಂದಾದ ವಿಪಕ್ಷಗಳು

ವಿದೇಶಾಂಗ ನೀತಿಯ ಬಗ್ಗೆ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಿರೋಧ ಪಕ್ಷಗಳು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ವಿರುದ್ಧ ಶುಕ್ರವಾರ ರಾಜ್ಯಸಭೆಯಲ್ಲಿ ಹಕ್ಕುಚ್ಯುತಿ ನಿರ್ಣಯ ಮಂಡಿಸಲಿವೆ...

ನವದೆಹಲಿ: ವಿದೇಶಾಂಗ ನೀತಿಯ ಬಗ್ಗೆ ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಿರೋಧ ಪಕ್ಷಗಳು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ವಿರುದ್ಧ ಶುಕ್ರವಾರ ರಾಜ್ಯಸಭೆಯಲ್ಲಿ ಹಕ್ಕುಚ್ಯುತಿ ನಿರ್ಣಯ ಮಂಡಿಸಲಿವೆ. 
ಬ್ಯಾಂಬರ್ಗ್ ಏಷ್ಯಾ ಆಫ್ರಿಕಾ ಸಂಬಂಧಗಳ ಸಮಾವೇಶದ ವೇಳೆ ಮತ್ತು 2015ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಲಾಹೋರ್ ಭೇಟಿ ಕುರಿತು ತಪ್ಪು ಮಾಹಿತಿ ನೀಡಿದ್ದಾರೆಂದು ವಿರೋಧ ಪಕ್ಷಗಳು ಆರೋಪಿ ಮಾಡಿವೆ. 
ಈ ನಡುವೆ ವಿರೋಧ ಪಕ್ಷಗಳ ಆರೋಪವನ್ನು ತಳ್ಳಿ ಹಾಕಿರುವ ಸುಷ್ಮಾ ಸ್ವರಾಜ್ ಅವರು, ನಾನು ಬ್ಯಾಂಬರ್ಗ್ ಏಷ್ಯಾ ಆಫ್ರಿಕಾ ಸಂಬಂಧಗಳ ಸಮಾವೇಶದ ವೇಳೆ ಯಾವುದೇ ರೀತಿಯ ಹೇಳಿಕೆಯನ್ನು ನೀಡಿಲ್ಲ. ವಿರೋಧ ಪಕ್ಷಗಳು ಉದ್ದೇಶಿತ ಕೆಲ ವಿಡಿಯೋಗಳನ್ನು ತೆಗೆದುಕೊಂಡು ಅದನ್ನೇ ಸಾಕ್ಷ್ಯಾಧಾರವೆಂಬಂತೆ ತೋರಿಸುತ್ತಿವೆ ಎಂದಿದ್ದಾರೆ. 

ಇದರಂತೆ ಮೋದಿ ಲಾಹೋರ್ ಭೇಟಿ ಕುರಿತಂತಿರುವ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಅವರು, ಮೋದಿ ಲಾಹೋರ್ ಭೇಟಿ ಬಳಿಂಕ ಅಂತಹ ಯಾವುದೇ ರೀತಿಯ ಉಗ್ರ ದಾಳಿ ಘಟನೆಗಳು ನಡೆದಿಲ್ಲ ಎಂದಿದ್ದಾರೆ. 

ಸುಷ್ಮಾಸ್ವರಾಜ್ ಅವರು ಹೇಳಿಕೆ ನೀಡುತ್ತಿದ್ದಂತೆಯೇ ಕಿಡಿಕಾಡಿರುವ ವಿರೋಧ ಪಕ್ಷಗಳ ನಾಯಕರು, ಮೋದಿ ಲಾಹೋರ್ ಗೆ ಭೇಟಿ ನೀಡಿದ ಕೆಲವೇ ದಿನಗಳಲ್ಲಿ ಪಠಾಣ್ ಕೋಟ್ ಸೇನಾನೆಲೆ ಮೇಲೆ ಉಗ್ರರು ದಾಳಿ ನಡೆಸಿದ್ದರು. ಇದಲ್ಲದೆ, ಇದೇ ರೀತಿಯ 5 ಉಗ್ರರ ದಾಳಿ ನಡೆದಿದ್ದವು ಎಂದಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್