ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ದೇಶ

ಕಾರಿನ ಮೇಲೆ ದಾಳಿ: ಅದು ಬಿಜೆಪಿ, ಆರ್'ಎಸ್ಎಸ್ ರಾಜಕೀಯದ ದಾರಿ ಎಂದ ರಾಹುಲ್ ಗಾಂಧಿ

ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್'ಎಸ್ಎಸ್) ದವರು ನನ್ನ ಕಾರಿನ ಮೇಲೆ ದಾಳಿ ನಡೆಸಿದ್ದರು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು...

ನವದೆಹಲಿ: ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್'ಎಸ್ಎಸ್) ದವರು ನನ್ನ ಕಾರಿನ ಮೇಲೆ ದಾಳಿ ನಡೆಸಿದ್ದರು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಶನಿವಾರ ಹೇಳಿದ್ದಾರೆ. 
ನಿನ್ನೆಯಷ್ಟೇ ಪ್ರವಾಹ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಲು ಗುಜರಾತ್'ಗೆ ತೆರಳಿದ್ದ ವೇಳೆ ರಾಹುಲ್ ಗಾಂಧಿಯವರ ಕಾರಿನ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ್ದರು. ಅಲ್ಲದೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪರ ಘೋಷಣೆಗಳನ್ನು ಕೂಗಿದ್ದರು. 
ಘಟನೆ ಕುರಿತಂತೆ ಇಂದು ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿ ಕಾರ್ಯಕರ್ತರು ನನ್ನ ಮೇಲೆ ಕಲ್ಲುಗಳನ್ನ ಎಸೆದರು. ಈ ವೇಳೆ ನನ್ನ ಖಾಸಗಿ ಭದ್ರತಾಧಿಕಾರಿಗೆ ಗಾಯವಾಗಿತ್ತು. ಇದು ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಆರ್'ಎಸ್ಎಸ್ ನವರ ರಾಜಕೀಯ ಶೈಲಿಯಾಗಿದೆ. ಇದಕ್ಕಿಂತ ನಾನು ಇನ್ನೇನು ಹೇಳಲಿ? ಎಂದು ಹೇಳಿದ್ದಾರೆ. 
ದಾಳಿ ಕೃತ್ಯವನ್ನು ಬಿಜೆಪಿಯವರೇ ಮಾಡಿದ್ದು, ಬಿಜೆಪಿ ನಾಯಕರು ಈ ಘಟನೆಯನ್ನು ಖಂಡಿಸುತ್ತಾರೆಯೇ...? ಎಂದು ಪ್ರಶ್ನಿಸಿದ್ದಾರೆ. 
ಘಟನೆಗೆ ಗುಜರಾತ್ ರಾಜ್ಯ ಮುಖ್ಯಮಂತ್ರಿ ವಿಜಯ್ ರೂಪಾನಿಯವರು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ರಾಹುಲ್ ಗಾಂಧಿಯವರ ಕಾರಿನ ಮೇಲೆ ನಡೆದಿರುವ ದಾಳಿ ಖಂಡನೀಯ ಹಾಗೂ ದುರಾದೃಷ್ಟರ ಸಂಗತಿ. ಘಟನೆಗೆ ಸಂಬಂಧ ಈಗಾಗಲೇ ಹಿರಿಯ ಅಧಿಕಾರಿಯನ್ನು ನೇಮಿಸಿ ತನಿಖೆಗೆ ಆದೇಶಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇವೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT