ಯೋಗ ಗುರು ಬಾಬಾ ರಾಮ್'ದೇವ್ 
ದೇಶ

ಪ್ರತೀಯೊಬ್ಬ ಭಾರತೀಯನೂ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಬೇಕು: ಬಾಬಾ ರಾಮ್ ದೇವ್

ಡೋಕ್ಲಾಮ್ ಗಡಿ ಬಿಕ್ಕಟ್ಟು ಕುರಿತಂತೆ ಭಾರತ ಹಾಗೂ ಚೀನಾ ಗಡಿಯಲ್ಲಿ ಪ್ರಕ್ಷುಬ್ಧ ವಾತಾವರಣ ಮುಂದುವರೆದಿರುವ ನಡುವಲ್ಲೇ, ಚೀನಾದ ಉತ್ಪನ್ನಗಳನ್ನು ಪ್ರತೀಯೊಬ್ಬ ಭಾರತೀಯನೂ ಬಹಿಷ್ಕರಿಸಬೇಕೆಂದು ಯೋಗ ಗುರು ಬಾಬಾ ರಾಮ್'ದೇವ್...

ಹರಿದ್ವಾರ: ಡೋಕ್ಲಾಮ್ ಗಡಿ ಬಿಕ್ಕಟ್ಟು ಕುರಿತಂತೆ ಭಾರತ ಹಾಗೂ ಚೀನಾ ಗಡಿಯಲ್ಲಿ ಪ್ರಕ್ಷುಬ್ಧ ವಾತಾವರಣ ಮುಂದುವರೆದಿರುವ ನಡುವಲ್ಲೇ, ಚೀನಾದ ಉತ್ಪನ್ನಗಳನ್ನು ಪ್ರತೀಯೊಬ್ಬ ಭಾರತೀಯನೂ ಬಹಿಷ್ಕರಿಸಬೇಕೆಂದು ಯೋಗ ಗುರು ಬಾಬಾ ರಾಮ್'ದೇವ್ ಅವರು ಶನಿವಾರ ಕರೆ ನೀಡಿದ್ದಾರೆ. 
ಈ ಕುರಿತಂತೆ ಮಾತನಾಡಿರುವ ಅವರು, ಚೀನಾ ಪಾಕಿಸ್ತಾನದ ಭಯೋತ್ಪಾದನೆಗೆ ಬಹಿರಂಗವಾಗಿಯೇ ಬೆಂಬಲವನ್ನು ನೀಡುತ್ತಿದೆ. ಪಾಕಿಸ್ತಾನಕ್ಕೆ ದಿಟ್ಟ ಉತ್ತರ ನೀಡುವ ಅಗತ್ಯವಿದೆ. ಮೊದಲಿಗೆ ನಾವು ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ನಮ್ಮ ವಶಕ್ಕೆ ಪಡೆದುಕೊಳ್ಳಬೇಕು. ನಂತರ ಪ್ರತೀಯೊಬ್ಬ ಭಾರತೀಯನೂ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸಬೇಕು ಎಂದು ಹೇಳಿದ್ದಾರೆ. 
ಭಾರತ ಹಾಗೂ ಚೀನಾ ನಡುವೆ ಪ್ರಕ್ಷುಬ್ಧ ವಾತಾವರಣ ಮುಂದುವರೆದಿದ್ದು, ರಾಜಕೀಯವನ್ನು ಬದಿಗಿಟ್ಟು ನಮ್ಮ ರಾಜಕೀಯ ಪಕ್ಷಗಳು ಕೈಜೋಡಿಸಬೇಕಿದೆ. ಚೀನಾ ನಿರ್ಮಿತ ಉತ್ಪನ್ನಗಳನ್ನು ಬಹಿಷ್ಕರಿಸಬೇಕಿದೆ. ಸಾರ್ವಜನಿಕರು ಚೀನಾ ವಸ್ತುಗಳನ್ನು ಖರೀದಿಸಬಾರದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT