ದೇಶ

ಉಪ ರಾಷ್ಟ್ರಪತಿ ಚುನಾವಣೆ 2017: ನಾನು ಯಾರ ವಿರುದ್ಧವೂ ಸ್ಪರ್ಧಿಸುತ್ತಿಲ್ಲ- ವೆಂಕಯ್ಯ ನಾಯ್ಡು

Manjula VN

ನವದೆಹಲಿ: ನಾನು ಯಾವುದೇ ಪಕ್ಷದ ವಿರುದ್ಧವಾಗಲೀ ಅಥವಾ ವ್ಯಕ್ತಿಯ ವಿರುದ್ಧವಾಗಲೀ ಸ್ಪರ್ಧಿಸುತ್ತಿಲ್ಲ ಎಂದು ಆಡಳಿತಾರೂಢ ಎನ್'ಡಿಎ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಅವರು ಶನಿವಾರ ಹೇಳಿದ್ದಾರೆ. 

ಮತದಾನಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಾಕಷ್ಟು ರಾಜಕೀಯ ಪಕ್ಷಗಳು ನನಗೆ ಬೆಂಬಲ ವ್ಯಕ್ತಪಡಿಸುತ್ತಿವೆ. ಗೆಲವು ಸಾಧಿಸುವ ವಿಶ್ವಾಸವಿದೆ. ನಾನು ಯಾವುದೇ ಪಕ್ಷದ ವಿರುದ್ಧವಾಗಲೀ ಅಥವಾ ಯಾವುದೇ ವ್ಯಕ್ತಿಯ ವಿರುದ್ಧವಾಗಲೀ ಸ್ಪರ್ಧಿಸುತ್ತಿಲ್ಲ ಎಂದು ಹೇಳಿದ್ದಾರೆ. 

ಸಂಸತ್ತಿನ ಎರಡೂ ಸದನಗಳಲ್ಲಿರುವ ಸದಸ್ಯರಿಗೆ ನಾನು ಗೊತ್ತಿರುವ ವ್ಯಕ್ತಿಯಾಗಿದ್ದೇನೆ. ಹೀಗಾಗಿ ನಾನು ಯಾವುದೇ ಪ್ರಚಾರಗಳನ್ನು ನಡೆಸಲಿಲ್ಲ. ಪ್ರತೀಯೊಬ್ಬರಿಗೂ ನಾನು ಪತ್ರ ಬರೆದಿದ್ದೆ, ಎಲ್ಲರೂ ಉತ್ತಮವಾಗಿಯೇ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ, ಉಪರಾಷ್ಟ್ರಪತಿ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಸ್ಥಾನಕ್ಕೆ ಸ್ಥಾನವೊದಗಿಸುವ ಕೆಲವನ್ನು ನಾನು ಮಾಡುತ್ತೇನೆಂದು ತಿಳಿಸಿದ್ದಾರೆ. 
SCROLL FOR NEXT