ಆಡಳಿತಾರೂಢ ಎನ್'ಡಿಎ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು 
ದೇಶ

ಉಪ ರಾಷ್ಟ್ರಪತಿ ಚುನಾವಣೆ 2017: ನಾನು ಯಾರ ವಿರುದ್ಧವೂ ಸ್ಪರ್ಧಿಸುತ್ತಿಲ್ಲ- ವೆಂಕಯ್ಯ ನಾಯ್ಡು

ನಾನು ಯಾವುದೇ ಪಕ್ಷದ ವಿರುದ್ಧವಾಗಲೀ ಅಥವಾ ವ್ಯಕ್ತಿಯ ವಿರುದ್ಧವಾಗಲೀ ಸ್ಪರ್ಧಿಸುತ್ತಿಲ್ಲ ಎಂದು ಆಡಳಿತಾರೂಢ ಎನ್'ಡಿಎ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಅವರು ಶನಿವಾರ ಹೇಳಿದ್ದಾರೆ...

ನವದೆಹಲಿ: ನಾನು ಯಾವುದೇ ಪಕ್ಷದ ವಿರುದ್ಧವಾಗಲೀ ಅಥವಾ ವ್ಯಕ್ತಿಯ ವಿರುದ್ಧವಾಗಲೀ ಸ್ಪರ್ಧಿಸುತ್ತಿಲ್ಲ ಎಂದು ಆಡಳಿತಾರೂಢ ಎನ್'ಡಿಎ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಅವರು ಶನಿವಾರ ಹೇಳಿದ್ದಾರೆ. 

ಮತದಾನಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಾಕಷ್ಟು ರಾಜಕೀಯ ಪಕ್ಷಗಳು ನನಗೆ ಬೆಂಬಲ ವ್ಯಕ್ತಪಡಿಸುತ್ತಿವೆ. ಗೆಲವು ಸಾಧಿಸುವ ವಿಶ್ವಾಸವಿದೆ. ನಾನು ಯಾವುದೇ ಪಕ್ಷದ ವಿರುದ್ಧವಾಗಲೀ ಅಥವಾ ಯಾವುದೇ ವ್ಯಕ್ತಿಯ ವಿರುದ್ಧವಾಗಲೀ ಸ್ಪರ್ಧಿಸುತ್ತಿಲ್ಲ ಎಂದು ಹೇಳಿದ್ದಾರೆ. 

ಸಂಸತ್ತಿನ ಎರಡೂ ಸದನಗಳಲ್ಲಿರುವ ಸದಸ್ಯರಿಗೆ ನಾನು ಗೊತ್ತಿರುವ ವ್ಯಕ್ತಿಯಾಗಿದ್ದೇನೆ. ಹೀಗಾಗಿ ನಾನು ಯಾವುದೇ ಪ್ರಚಾರಗಳನ್ನು ನಡೆಸಲಿಲ್ಲ. ಪ್ರತೀಯೊಬ್ಬರಿಗೂ ನಾನು ಪತ್ರ ಬರೆದಿದ್ದೆ, ಎಲ್ಲರೂ ಉತ್ತಮವಾಗಿಯೇ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ, ಉಪರಾಷ್ಟ್ರಪತಿ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಸ್ಥಾನಕ್ಕೆ ಸ್ಥಾನವೊದಗಿಸುವ ಕೆಲವನ್ನು ನಾನು ಮಾಡುತ್ತೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸರ್ವೋಚ್ಚ ನಾಯಕನ ಆಯ್ಕೆಗಾಗಿ 88 ಸದಸ್ಯರು ಸೇರಿದ್ದ ಕಟ್ಟಡ ಧ್ವಂಸಗೈದ ಇಸ್ರೇಲ್; 9 ಸಾವಿರ ಕೋಟಿಯ ಅಮೆರಿಕದ ರೇಡಾರ್ ಧ್ವಂಸ!

ಕೊಲ್ಲಿ ದೇಶಗಳಿಂದ ಇಂಧನ ಪೂರೈಕೆ ಬಿಕ್ಕಟ್ಟು: ಭಾರತದ ಕೈಹಿಡಿಯಲು ಮುಂದಾದ ರಷ್ಯಾ!

ಚಿಕ್ಕಬಳ್ಳಾಪುರ: 70 ಸಾವಿರ ಲಂಚ ಪಡೆಯುತ್ತಿದ್ದಾಗ PSI, ASI ಲೋಕಾಯುಕ್ತ ಬಲೆಗೆ

'ತುಂಬಾ ಲೇಟ್ ಆಯಿತು': ಇರಾನ್​ ಮಾತುಕತೆ ಪ್ರಸ್ತಾಪಕ್ಕೆ ಟ್ರಂಪ್ ತಿರುಗೇಟು

Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!

SCROLL FOR NEXT