ದೇಶ

ಉಗ್ರರಿಗೆ ನೆರವು ಪ್ರಕರಣ: ಬಂಧಿತ ಅಸ್ಲಾಂ ವನಿ ಆ.14ರವರೆಗೆ ಇಡಿ ವಶಕ್ಕೆ

Srinivasamurthy VN

ನವದೆಹಲಿ: ಪಾಕಿಸ್ತಾನ ಮೂಲದ ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುತ್ತಿದ್ದ ಆರೋಪದ ಮೇರೆಗೆ ಭಾನುವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೀಡಾಗಿದ್ದ ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ  ಶಬೀರ್‌ ಶಾ ಆಪ್ತ ಅಸ್ಲಾಂ ವನಿಯನ್ನು ನ್ಯಾಯಾಲಯ ಆ.14ರವರೆಗೆ ಇಡಿ ವಶಕ್ಕೆ ನೀಡಿದೆ.

ಇಂದು ಬೆಳಗ್ಗೆ ಕಾಶ್ಮೀರದಲ್ಲಿ ಬಂಧಿತನಾಗಿದ್ದ ವನಿಯನ್ನು ಇಂದು ಸಂಜೆ ವೇಳೆಗೆ ದೆಹಲಿಗೆ ಕರೆತರಲಾಗಿತ್ತು. ಬಳಿಕ ಆತನನ್ನು ನ್ಯಾಯಾಲಯದ ಮುಂದೆ ಅಧಿಕಾರಿಗಳು ಹಾಜರು ಪಡಿಸಿದ್ದರು. ಇದೀಗ ಆರೋಪಿ ವನಿಯನ್ನು  ನ್ಯಾಯಾಲಯ ಹೆಚ್ಚಿನ ವಿಚಾರಣೆಗೆಗಾಗಿ ಆಗಸ್ಟ್ 14ರವರೆಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಶಕ್ಕೆ ನೀಡಿದೆ.

ಉಗ್ರರಿಗೆ ಆರ್ಥಿಕ ನೆರವು ನೀಡಿದ ಆರೋಪ ಮತ್ತು ದಶಕಗಳ ಹಿಂದಿನ ಹವಾಲಾ ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಖಚಿತ ಸಾಕ್ಷ್ಯಾಧಾರಗಳು ದೊರೆತ ಹಿನ್ನಲೆಯಲ್ಲಿ ವನಿಯನ್ನು ಬಂಧಿಸಲಾಗಿತ್ತು. ಭಯೋತ್ಪಾದಕರಿಗೆ ಹಣಕಾಸು  ನೆರವು ನೀಡುವ ಜಾಲದ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಈ ಜಾಲದಲ್ಲಿ ವನಿ ಪಾತ್ರವಿರುವ ಆರೋಪದ ಮೇಲೆ ಆತನನ್ನು ಬಂಧಿಸಲಾಗಿದೆ. ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವ ಜಾಲದಲ್ಲಿ  ಸಕ್ರಿಯವಾಗಿರುವ ಆರೋಪದ ಮೇಲೆ ಜುಲೈ 25ರಂದು ಶಬೀರ್ ಶಾ ಅವರನ್ನು ಬಂಧಿಸಲಾಗಿತ್ತು. ಶಬೀರ್‌ ಅವರಿಗೆ ರು. 2.25 ಕೋಟಿ ಹಣ ನೀಡಿದ್ದಾಗಿ ವನಿ ಈ ಹಿಂದೆ ಬಂಧನಕ್ಕೊಳಗಾಗಿದ್ದ ವೇಳೆ ತಪ್ಪೊಪ್ಪಿಕೊಂಡಿದ್ದರು ಎಂದು  ಅಧಿಕಾರಿಗಳು ತಿಳಿಸಿದ್ದಾರೆ.

SCROLL FOR NEXT