ಪ್ರತ್ಯೇಕತಾವಾದಿ ಶಬ್ಬೀರ್ ಶಾ (ಸಂಗ್ರಹ ಚಿತ್ರ) 
ದೇಶ

ಉಗ್ರರಿಗೆ ನೆರವು ಪ್ರಕರಣ: ಬಂಧಿತ ಅಸ್ಲಾಂ ವನಿ ಆ.14ರವರೆಗೆ ಇಡಿ ವಶಕ್ಕೆ

ಪಾಕಿಸ್ತಾನ ಮೂಲದ ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುತ್ತಿದ್ದ ಆರೋಪದ ಮೇರೆಗೆ ಭಾನುವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೀಡಾಗಿದ್ದ ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ ಶಬೀರ್‌ ಶಾ ಆಪ್ತ ಅಸ್ಲಾಂ ವನಿಯನ್ನು ನ್ಯಾಯಾಲಯ ಆ.14ರವರೆಗೆ ಇಡಿ ವಶಕ್ಕೆ ನೀಡಿದೆ.

ನವದೆಹಲಿ: ಪಾಕಿಸ್ತಾನ ಮೂಲದ ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುತ್ತಿದ್ದ ಆರೋಪದ ಮೇರೆಗೆ ಭಾನುವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೀಡಾಗಿದ್ದ ಕಾಶ್ಮೀರ ಪ್ರತ್ಯೇಕತಾವಾದಿ ನಾಯಕ  ಶಬೀರ್‌ ಶಾ ಆಪ್ತ ಅಸ್ಲಾಂ ವನಿಯನ್ನು ನ್ಯಾಯಾಲಯ ಆ.14ರವರೆಗೆ ಇಡಿ ವಶಕ್ಕೆ ನೀಡಿದೆ.

ಇಂದು ಬೆಳಗ್ಗೆ ಕಾಶ್ಮೀರದಲ್ಲಿ ಬಂಧಿತನಾಗಿದ್ದ ವನಿಯನ್ನು ಇಂದು ಸಂಜೆ ವೇಳೆಗೆ ದೆಹಲಿಗೆ ಕರೆತರಲಾಗಿತ್ತು. ಬಳಿಕ ಆತನನ್ನು ನ್ಯಾಯಾಲಯದ ಮುಂದೆ ಅಧಿಕಾರಿಗಳು ಹಾಜರು ಪಡಿಸಿದ್ದರು. ಇದೀಗ ಆರೋಪಿ ವನಿಯನ್ನು  ನ್ಯಾಯಾಲಯ ಹೆಚ್ಚಿನ ವಿಚಾರಣೆಗೆಗಾಗಿ ಆಗಸ್ಟ್ 14ರವರೆಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಶಕ್ಕೆ ನೀಡಿದೆ.

ಉಗ್ರರಿಗೆ ಆರ್ಥಿಕ ನೆರವು ನೀಡಿದ ಆರೋಪ ಮತ್ತು ದಶಕಗಳ ಹಿಂದಿನ ಹವಾಲಾ ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಖಚಿತ ಸಾಕ್ಷ್ಯಾಧಾರಗಳು ದೊರೆತ ಹಿನ್ನಲೆಯಲ್ಲಿ ವನಿಯನ್ನು ಬಂಧಿಸಲಾಗಿತ್ತು. ಭಯೋತ್ಪಾದಕರಿಗೆ ಹಣಕಾಸು  ನೆರವು ನೀಡುವ ಜಾಲದ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಈ ಜಾಲದಲ್ಲಿ ವನಿ ಪಾತ್ರವಿರುವ ಆರೋಪದ ಮೇಲೆ ಆತನನ್ನು ಬಂಧಿಸಲಾಗಿದೆ. ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವ ಜಾಲದಲ್ಲಿ  ಸಕ್ರಿಯವಾಗಿರುವ ಆರೋಪದ ಮೇಲೆ ಜುಲೈ 25ರಂದು ಶಬೀರ್ ಶಾ ಅವರನ್ನು ಬಂಧಿಸಲಾಗಿತ್ತು. ಶಬೀರ್‌ ಅವರಿಗೆ ರು. 2.25 ಕೋಟಿ ಹಣ ನೀಡಿದ್ದಾಗಿ ವನಿ ಈ ಹಿಂದೆ ಬಂಧನಕ್ಕೊಳಗಾಗಿದ್ದ ವೇಳೆ ತಪ್ಪೊಪ್ಪಿಕೊಂಡಿದ್ದರು ಎಂದು  ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT