ಬಾಂಗ್ಲಾದೇಶದ ಶಂಕಿತ ಉಗ್ರ ಅಬ್ದುಲ್ಲಾ 
ದೇಶ

ಉ.ಪ್ರ: ಮುಜಾಫರ್ ನಗರದಲ್ಲಿ ಬಾಂಗ್ಲಾದೇಶದ ಶಂಕಿತ ಭಯೋತ್ಪಾದಕನ ಬಂಧನ

ಉಗ್ರಗಾಮಿ ಚಟುವಟಿಕೆ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ ಉತ್ತರ...

ಮುಜಾಫರ್ ನಗರ್(ಉ.ಪ್ರ): ಉಗ್ರಗಾಮಿ ಚಟುವಟಿಕೆ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ಭಯೋತ್ಪಾದಕ ವಿರೋಧಿ ಪಡೆ ಇಂದು ಮುಜಾಫರ್ ನಗರದ ಕುಟೆಸರಾ ಗ್ರಾಮದಲ್ಲಿ ಬಾಂಗ್ಲಾದೇಶದ ವ್ಯಕ್ತಿಯನ್ನು ಬಂಧಿಸಿದೆ.
ಶಂಕಿತನನ್ನು ಅಬ್ದುಲ್ಲಾ ಎಂದು ಗುರುತಿಸಲಾಗಿದ್ದು ಆತ ನಕಲಿ ಗುರುತುಪತ್ರವನ್ನು ಹಂಚಿ ಇತರ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದ್ದ ಎಂದು ಹೇಳಲಾಗುತ್ತಿದೆ.
ಅಬ್ದುಲ್ಲಾ ಬಾಂಗ್ಲಾದೇಶದ ಭಯೋತ್ಪಾದಕ ಗುಂಪು ಅನ್ಸರುಲ್ಲಾ ಬಾಂಗ್ಲಾ ತಂಡದ ಜೊತೆ ಸಹವಾಸ ಇಟ್ಟುಕೊಂಡಿದ್ದ. ಕಳೆದೊಂದು ತಿಂಗಳಿನಿಂದ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ವಾಸಿಸುತ್ತಿದ್ದು 2011ರಲ್ಲಿ ಸಹರಾನ್ ಪುರದಲ್ಲಿ ನೆಲೆಸಿದ್ದ. 
ಪ್ರಾಥಮಿಕ ತನಿಖೆ ವೇಳೆ, ಅಬ್ದುಲ್ಲಾ ನಕಲಿ ಗುರುತು ಪತ್ರ ಮತ್ತು ಪಾಸ್ ಪೋರ್ಟ್ ನ್ನು ಬಾಂಗ್ಲಾದೇಶದ ಭಯೋತ್ಪಾದಕರಿಗೆ ನೀಡುತ್ತಿದ್ದ. ಆ ಮೂಲಕ ಅಲ್ಲಿನ ಭಯೋತ್ಪಾದಕರಿಗೆ ಭಾರತದಲ್ಲಿ ನೆಲೆಸಲು ಸಹಾಯ ಮಾಡುತ್ತಿದ್ದ ಎನ್ನಲಾಗುತ್ತಿದೆ.
ಈ ಬಗ್ಗೆ ತನಿಖೆ ನಡೆಸಲು ಭಯೋತ್ಪಾದಕ ವಿರೋಧಿ ಪಡೆ ಮತ್ತೆ ಮೂವರನ್ನು ಕರೆಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಹ್ರೇನ್‌ ರಾಜನ ಜೊತೆಗೆ ಪ್ರಧಾನಿ ಮೋದಿ ಮಾತುಕತೆ: ಕೊಲ್ಲಿದೇಶಗಳ ಇಂಧನ ಮೂಲಸೌಕರ್ಯದ ಮೇಲಿನ ದಾಳಿಗೆ ಖಂಡನೆ!

ಕಪ್ಪಾಗಿರುವುದಕ್ಕೆ BCCI ಅವಕಾಶ ನೀಡ್ತಿಲ್ಲ: ಕಾಮೆಂಟರಿ ಪ್ಯಾನಲ್ ಗೆ ದಿಢೀರ್ ನಿವೃತ್ತಿ ಘೋಷಿಸಿದ ಭಾರತದ ಮಾಜಿ ಕ್ರಿಕೆಟಿಗ!

ಪಶ್ಚಿಮ ಏಷ್ಯಾ ಸಂಘರ್ಷ: ಗಲ್ಫ್‌ನಲ್ಲಿ ಆರು ಭಾರತೀಯರು ಸಾವು, ಒಬ್ಬರು ನಾಪತ್ತೆ; MEA

ಜಗತ್ತಿನಾದ್ಯಂತ ಜನರಲ್ಲಿ ಭೀತಿ ಸೃಷ್ಟಿಸಿದ ಇರಾನ್! ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ವಿಶ್ವದಾದ್ಯಂತ ವಿಸ್ತರಿಸುವ ಸಾಧ್ಯತೆ?

ಯುದ್ಧವನ್ನು ತಕ್ಷಣವೇ ಕೊನೆಗೊಳಿಸಬೇಕು; ಇದು ಇರಾನ್ ವಿರುದ್ಧ ಅಮೆರಿಕ, ಇಸ್ರೇಲ್‌ನ ಅಪ್ರಚೋದಿತ ಆಕ್ರಮಣ: ರಷ್ಯಾ

SCROLL FOR NEXT