ಸಂಗ್ರಹ ಚಿತ್ರ 
ದೇಶ

ಅಮರನಾಥ ಯಾತ್ರೆ ಮುಕ್ತಾಯ; ಉಗ್ರ ದಾಳಿ ಹೊರತಾಗಿಯೂ 2.60 ಲಕ್ಷ ಯಾತ್ರಾರ್ಥಿಗಳಿಂದ ದರ್ಶನ

40 ದಿನಗಳ ಪವಿತ್ರ ಅಮರನಾಥ್ ಯಾತ್ರೆ ಅಂತ್ಯಗೊಂಡಿದ್ದು, ಈ ಬಾರಿ ಉಗ್ರ ದಾಳಿ ಹೊರತಾಗಿಯೂ ಅಮರನಾಥ್ ಯಾತ್ರಾರ್ಥಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರ: 40 ದಿನಗಳ ಪವಿತ್ರ ಅಮರನಾಥ್ ಯಾತ್ರೆ ಅಂತ್ಯಗೊಂಡಿದ್ದು, ಈ ಬಾರಿ ಉಗ್ರ ದಾಳಿ ಹೊರತಾಗಿಯೂ ಅಮರನಾಥ್ ಯಾತ್ರಾರ್ಥಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪ್ರವಾಸೋಧ್ಯಮ ಇಲಾಖೆ ಮೂಲಗಳ  ಪ್ರಕಾರ ಈ ಬಾರಿ ಕಳೆದ ಬಾರಿಗಿಂತಲೂ ಸುಮಾರು 40 ಸಾವಿರಕ್ಕೂ ಹೆತ್ತು ಯಾತ್ರಾರ್ಥಿಗಳು ಅಮರನಾಥನ ದರ್ಶನ ಪಡೆದಿದ್ದು, ಈ ಬಾರಿ ಒಟ್ಟು 2.60 ಲಕ್ಷ  ಯಾತ್ರಾರ್ಥಿಗಳು ಆಗಮಿಸಿದ್ದರು ಎಂದು ಹೇಳಿದ್ದಾರೆ. ಕಳೆದ ಬಾರಿ ಅಂದರೆ 2016ನೇ ಸಾಲಿನಲ್ಲಿ ಒಟ್ಟು 2.20 ಲಕ್ಷ ಮಂದಿ ಯಾತ್ರಾರ್ಥಿಗಳು ಪಾಲ್ಗೊಂಡಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಂತೆಯೇ ಅಮರನಾಥ್ ಯಾತ್ರೆ ವೇಳೆ ಸಾವನ್ನಪ್ಪಿದವರ ಸಂಖೆಯಲ್ಲೂ ಕೂಡ ಗಣನೀಯ ಏರಿಕೆಯಾಗಿದ್ದು, ಈ ಬಾರಿ ವಿವಿಧ ಪ್ರಕರಣಗಳಲ್ಲಿ ಒಟ್ಟು 24 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಅಮರನಾಥ್ ಯಾತ್ರಾರ್ಥಿಗಳ ಮೇಲೆ  ನಡೆದ ಉಗ್ರ ದಾಳಿ ಕೂಡ ಸೇರಿದ್ದು, ಉಗ್ರದಾಳಿಯಲ್ಲಿ 8 ಯಾತ್ರಾರ್ಥಿಗಳು ಸಾವನ್ನಪ್ಪಿ 21 ಮಂದಿ ಗಾಯಗೊಂಡಿದ್ದರು. ಇದಲ್ಲದೆ ಅಮರನಾಥ್ ಯಾತ್ರೆ ವೇಳೆ ವಿವಿಧೆಡೆ ನಡೆದ ಅಪಘಾತಗಳಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ.  ಅಂತೆಯೇ ಓರ್ವ ಯಾತ್ರಾರ್ಥಿ ಯಾತ್ರೆ ಸಂದರ್ಭದಲ್ಲಿ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ ಎಂದು  ತಿಳಿದುಬಂದಿದೆ.

ಕಳೆದ ಜೂನ್ 29ರಂದು ಬಾಲ್ಟಾಲ್ ಮತ್ತು ಪೆಹಲ್ ಗಾಮ್ ಮಾರ್ಗಗಳ ಮೂಲಕ ಪವಿತ್ರ ಯಾತ್ರೆ ಆರಂಭಗೊಂಡಿತ್ತು. ರಕ್ಷ ಬಂಧನದ ಹಿಂದಿನ ದಿನಕ್ಕೆ ಯಾತ್ರೆ ಮುಕ್ತಾಯವಾಗುತ್ತದೆ. ಇಂದು ಅಮರನಾಥ್ ಗುಹೆಯಲ್ಲಿ ಅಂತಿಮ  ಪೂಜಾ ಕೈಂಕರ್ಯ ನಡೆಸಲಾಗಿ, ಆಗಸ್ಟ್ 9ರಂದು ಚ್ಚಾರಿ ಮುಬಾರಕ್ ಎನ್ನುವ ಪೂಜೆಯನ್ನು ಲಡ್ಡೇರಿ ನದಿ ತಟದಲ್ಲಿ ನೆರವೇರಿಸಲಾಗುತ್ತದೆ. ಅದರೊಂದಿಗೆ 2017ನೇ ಸಾಲಿನ ಅಮರನಾಥ ಯಾತ್ರೆ ಮುಕ್ತಾಯವಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT