ಸಂಗ್ರಹ ಚಿತ್ರ 
ದೇಶ

ಆಂತರಿಕ ಬೇಗುದಿ: ಕಾಂಗ್ರೆಸ್ ಪಕ್ಷದ ಎಲ್ಲ ಜವಾಬ್ದಾರಿಯಿಂದ ಮುಕ್ತಗೊಳಿಸುವಂತೆ ದಿಗ್ವಿಜಯ್ ಸಿಂಗ್ ಮನವಿ

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮತ್ತು ಪ್ರಧಾನ ಕಾರ್ಯದರ್ಶಿ ದಿಗ್ವಿಜಯ ಸಿಂಗ್ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.

ನವದೆಹಲಿ: ಗುಜರಾತ್ ರಾಜ್ಯಸಭೆ ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಹೊಸದೊಂದು ತಲೆನೋವು ಶುರುವಾಗಿದ್ದು, ತಮ್ಮ ಅಧಿಕಾರ ಮೊಟಕುಗೊಳಿಸಿದಕ್ಕೆ ಪ್ರತಿಭಟನಾರ್ಥವಾಗಿ, ಪಕ್ಷದ ಎಲ್ಲ ಜವಾಬ್ದಾರಿಗಳಿಂದ  ಮುಕ್ತಗೊಳಿಸುವಂತೆ ಪಕ್ಷದ ಹಿರಿಯ ಮುಖಂಡ ಮತ್ತು ಪ್ರಧಾನ ಕಾರ್ಯದರ್ಶಿ ದಿಗ್ವಿಜಯ ಸಿಂಗ್ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.

ಪ್ರಸ್ತುತ ಆಂಧ್ರ ಪ್ರದೇಶ ಘಟಕದ ಉಸ್ತುವಾರಿ ಹೊಣೆ ಹೊತ್ತಿದ್ದ ಸಿಂಗ್ ಅವರು, ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕರಾಗಿದ್ದಾರೆ. ಈ ಹಿಂದೆ ಗೋವಾ, ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಪಕ್ಷದ ಜವಾಬ್ದಾರಿಯನ್ನು ದಿಗ್ವಿಜಯ್ ಸಿಂಗ್   ಹೊಂದಿದ್ದರು. ಏತನ್ಮಧ್ಯೆ ಗೋವಾದಲ್ಲಿ ನಡೆದ ಚುನಾವಣೋತ್ತರ ಪರಿಸ್ಥಿತಿ ನಿಭಾಯಿಸಲು ವಿಫಲವಾದದ್ದು ಹಾಗೂ ಪಕ್ಷವನ್ನು ತಪ್ಪುದಾರಿಗೆ ಎಳೆದ ಆರೋಪ ಇವರ ಮೇಲಿತ್ತು. ಗೋವಾದಲ್ಲಿ ಅತೀ ಹೆಚ್ಚು ಶಾಸಕ ಬೆಂಬಲವನ್ನು  ಹೊಂದಿದ್ದರೂ ಸರ್ಕಾರ ರಚಿಸುವಲ್ಲಿ ಕಾಂಗ್ರೆಸ್ ವಿಫಲವಾಗಿತ್ತು.

ಇದೇ ಕಾರಣಕ್ಕೆ ದಿಗ್ವಿಜಯ್ ಸಿಂಗ್ ವಿರುದ್ಧ ಕಾಂಗ್ರೆಸ್ ಮುಖಂಡರೇ ಅಸಮಾಧಾನ ವ್ಯಕ್ತಪಡಿಸಿದ್ದರು. ಹೀಗಾಗಿ ದಿಗ್ವಿಜಯ್ ಸಿಂಗ್ ಅವರ ಅಧಿಕಾರ ವ್ಯಾಪ್ತಿಯನ್ನು ಮೊಟಕುಗೊಳಿಸಲಾಗಿತ್ತು. ಇದೇ ಅಸಮಾಧಾನದಿಂದಾಗಿ  ದಿಗ್ವಿಜಯ್ ಸಿಂಗ್ ಅವರು ನರ್ಮದಾ ಯಾತ್ರೆಯ ನೆಪ ಮಾಡಿ ತಮ್ಮನ್ನು ಪಕ್ಷದ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸುವಂತೆ ಮನವಿ ಮಾಡಿದ್ದಾರೆ.

ಆಧ್ಯಾತ್ಮಿಕ, ವೈಯಕ್ತಿಕ ಹಾಗೂ ರಾಜಕೀಯ ರಹಿತ ಆರು ತಿಂಗಳ ನರ್ಮದಾ ಯಾತ್ರೆಯನ್ನು ಸೆಪ್ಟೆಂಬರ್‌ನಲ್ಲಿ ಆರಂಭಿಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ದಿಗ್ವಿಜಯ ಸಿಂಗ್ ಈ ಮನವಿ ಮಾಡಿದ್ದು, 3,300 ಕಿಲೋ ಮೀಟರ್  ಯಾತ್ರೆ ಕೈಗೊಳ್ಳಲು ನಿರ್ಧರಿಸಿದ್ದಾರೆ, 'ನರ್ಮದಾ ಪರಿಕ್ರಮ' ಹೆಸರಿನ ಈ ಯಾತ್ರೆ ಮಧ್ಯ ಪ್ರದೇಶ ಹಾಗೂ ಗುಜರಾತ್‌ ನ ಎಲ್ಲ ಭಾಗಗಳನ್ನು ಒಳಗೊಳ್ಳಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜವಾಬ್ದಾರಿಯಿಂದ ಹಿಂದೆ ಸರಿಯಲು ಮುಂದಾದ ಮತ್ತೊರ್ವ ನಾಯಕಿ
ಮತ್ತೊಂದೆಡೆ ದಿಗ್ವಿಜಯ್ ಸಿಂಗ್ ಮನವಿ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಮತ್ತೋರ್ವ ಹಿರಿಯ ನಾಯಕಿ ಅಂಬಿಕಾ ಸೋನಿ ಅವರೂ ಕೂಡ ಅನಾರೋಗ್ಯದ ನೆಪವೊಡ್ಡಿ ಜವಾಬ್ದಾರಿಯಿಂದ ಹಿಂದೆ ಸರಿಯಲು ಯತ್ನಿಸಿದ್ದಾರೆ. ಜಮ್ಮು  ಕಾಶ್ಮೀರ, ಉತ್ತರಾಖಂಡ ಹಾಗೂ ಹಿಮಾಚಲಪ್ರದೇಶದ ಉಸ್ತುವಾರಿಯನ್ನು ಅಂಬಿಕಾ ಸೋನಿ ಹೊಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT