ಕಾಂಗ್ರೆಸ್ 
ದೇಶ

ಬಿಜೆಪಿ ಕುದುರೆ ವ್ಯಾಪಾರದಿಂದ ತಪ್ಪಿಸಿಕೊಳ್ಳಲು ಅಡಗಿಕೊಳ್ಳುವುದೇ ಮಾರ್ಗವಲ್ಲ: ಕಾಂಗ್ರೆಸ್ ಗೆ ಜೆಡಿಯು

ಶಾಸಕರನ್ನು ಬಚ್ಚಿಡುವ ಮೂಲಕ ಬಿಜೆಪಿಯ ಕುದುರೆ ವ್ಯಾಪಾರಕ್ಕೆ ತಕ್ಕ ಉತ್ತರ ನೀಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಗೆ ಜೆಡಿಯು ಹೇಳಿದೆ.

ನವದೆಹಲಿ: ಶಾಸಕರನ್ನು ಬಚ್ಚಿಡುವ ಮೂಲಕ ಬಿಜೆಪಿಯ ಕುದುರೆ ವ್ಯಾಪಾರಕ್ಕೆ ತಕ್ಕ ಉತ್ತರ ನೀಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಗೆ ಜೆಡಿಯು ಹೇಳಿದೆ. 
ಬಿಜೆಪಿಯ ಕುದುರೆ ವ್ಯಾಪಾರ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಡಿಯು ನಾಯಕ ಅಲಿ ಅನ್ವರ್, ಬಿಜೆಪಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಬಿಜೆಪಿ ಬಹಿರಂಗವಾಗಿಯೇ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಬಿಜೆಪಿಗೆ ಹೆದರಿರುವ ಕೆಲವರು ಕರ್ನಾಟಕದಲ್ಲಿ ಅಡಗಿಕೊಳ್ಳುತ್ತಿದ್ದಾರೆ. ಆದರೆ ರಾಜಕೀಯದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದು ಸಾರ್ವಜನಿಕರು ಎಂಬುದನ್ನು ಕಾಂಗ್ರೆಸ್ ಅರ್ಥಮಾಡಿಕೊಳ್ಳಬೇಕು ಎಂದು ಜೆಡಿಯು ನಾಯಕ ಅಲಿ ಅನ್ವರ್ ಹೇಳಿದ್ದಾರೆ. 
ಪ್ರತಿಯೊಬ್ಬರ ಕಣ್ಗಳಲ್ಲಿ ದುರ್ಬಲರಾಗಿ ಕಾಣುವವರೇ ಅತ್ಯಂತ ಶಕ್ತಿಶಾಲಿಗಳಾಗಿರುತ್ತಾರೆ. ಬೇರೆಡೆಗೆ ಹೋಗುವುದರಿಂದ ಬಿಜೆಪಿಯ ಕುದುರೆ ವ್ಯಾಪಾರಕ್ಕೆ ತಕ್ಕ ಉತ್ತರ ನೀಡಲು ಸಾಧ್ಯವಿಲ್ಲ ಎಂದು ಜೆಡಿಯು ಅಭಿಪ್ರಾಯಪಟ್ಟಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT