ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಎಸ್.ಪಿ. ವೈದ್ 
ದೇಶ

ಪಾಕ್ ಪ್ರಾಯೋಜಿತ ಭಯೋತ್ಪಾದನೆಯಿಂದ ಕಾಶ್ಮೀರ ಮುಕ್ತಗೊಳಿಸಲು ನಿಲುವು ತಾಳಿದ್ದೇವೆ: ಜಮ್ಮು-ಕಾಶ್ಮೀರ ಪೊಲೀಸ್

ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯಿಂದ ಕಾಶ್ಮೀರವನ್ನು ಮುಕ್ತಗೊಳಿಸಲು ನಿಲುವು ತಾಳಿದ್ದೇವೆಂದು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಎಸ್.ಪಿ. ವೈದ್ ಅವರು ಸೋಮವಾರ ಹೇಳಿದ್ದಾರೆ...

ಶ್ರೀನಗರ: ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯಿಂದ ಕಾಶ್ಮೀರವನ್ನು ಮುಕ್ತಗೊಳಿಸಲು ನಿಲುವು ತಾಳಿದ್ದೇವೆಂದು ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಎಸ್.ಪಿ. ವೈದ್ ಅವರು ಸೋಮವಾರ ಹೇಳಿದ್ದಾರೆ.
ಪುಲ್ವಾಮ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ 50 ಆರ್'ಆರ್, ಸಿಆರ್ ಪಿಎಫ್ ಪಡೆಗಳು ಜಂಟಿಯಾಗಿ ನಡೆಸಿದ್ದ ಕಾರ್ಯಾಚರಣೆಯಲ್ಲಿ ಓರ್ವ ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರನನ್ನು ಹತ್ಯೆ ಮಾಡಿದೆ. 
ಎನ್ ಕೌಂಟರ್ ಕುರಿತಂತೆ ಪ್ರತಿಕ್ರಿಯೆ ನೀಡಿರುವ ವೈದ್ ಅವರು, 2-3 ಉಗ್ರರು ಸಂಬೂರಾ ಪ್ರದೇಶದಲ್ಲಿ ತಮ್ಮ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ನಂತರ ಅವಂತಿಪುರ ಪೊಲೀಸ್ ಹಾಗೂ ಕೇಂದ್ರೀಯ ಸಶಸ್ತ್ರ ಮೀಸಲು ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿಯಿತು. ಗುಂಡಿನ ಕಾಳಗದಲ್ಲಿ ಇಬ್ಬರಿಗೆ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ. 
ಸ್ಥಳದಲ್ಲಿ ಇಬ್ಬರು ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯವರಾಗಿದ್ದರು. ಮತ್ತೊಬ್ಬ ಸ್ಥಳೀಯ ಉಗ್ರನಾಗಿದ್ದು, ಸ್ಥಳದಲ್ಲಿ ಅಡಗಿ ಕುಳಿತಿದ್ದರು. ಈ ವೇಳೆ ನಡೆಸಲಾದ ಎನ್ ಕೌಂಟರ್ ನಲ್ಲಿ ಉಗ್ರ ಉಮರ್ ಎಂಬಾತನನ್ನು ಹತ್ಯೆ ಮಾಡಲಾಯಿತು ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮಧ್ಯಾಹ್ನ 2.30ಕ್ಕೆ ಸಿದ್ದರಾಮಯ್ಯ ರಾಜೀನಾಮೆ; 3 ಗಂಟೆಗೆ ಪತ್ರಿಕಾಗೋಷ್ಠಿ; ಮುಂದಿನ CM ಡಿ.ಕೆ ಶಿವಕುಮಾರ್

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT