ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ 
ದೇಶ

ರಾಹುಲ್'ರನ್ನು ಹತ್ಯೆ ಮಾಡಲು ಬಿಜೆಪಿ-ಆರ್'ಎಸ್ಎಸ್ ಯತ್ನಿಸುತ್ತಿದೆ: ಲಾಲು ಪ್ರಸಾದ್ ಯಾದವ್

ಬಿಜೆಪಿ ಹಾಗೂ ಆರ್'ಎಸ್ಎಸ್ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಜೀವ ತೆಗೆಯಲು ಯತ್ನಿಸುತ್ತಿದೆ ಎಂದು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್...

ಪಾಟ್ನ: ಬಿಜೆಪಿ ಹಾಗೂ ಆರ್'ಎಸ್ಎಸ್ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರ ಜೀವ ತೆಗೆಯಲು ಯತ್ನಿಸುತ್ತಿದೆ ಎಂದು ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಮಂಗಳವಾರ ಆರೋಪಿಸಿದ್ದಾರೆ. 
ಪ್ರವಾಹ ಪೀಡಿತ ಗುಜರಾತ್ ಭೇಟಿ ವೇಳೆ ರಾಹುಲ್ ಗಾಂಧಿಯವರ ಕಾರಿನ ಮೇಲೆ ದಾಳಿಯಾದ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಲಾಲು, ರಾಹುಲ್ ಗಾಂಧಿಯವರನ್ನು ತಮ್ಮ ಹಾದಿಯಿಂದ ಬದಿಗೆ ಸರಿಸುವ ಸಲುವಾಗಿ ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ರಾಹುಲ್ ಗಾಂಧಿಯವರನ್ನು ಹತ್ಯೆ ಮಾಡಲು ಯತ್ನ ನಡೆಸುತ್ತಿದ್ದಾರೆಂದು ಹೇಳಿದ್ದಾರೆ. 
ಆ.4 ರಂದು ಪ್ರವಾಹ ಸಂತ್ರಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳಲು ಗುಜರಾತ್'ಗೆ ತೆರಳಿದ್ದ ವೇಳೆ ರಾಹುಲ್ ಗಾಂಧಿಯವರ ಕಾರಿನ ಮೇಲೆ ಕೆಲವರು ಕಲ್ಲು ತೂರಾಟ ನಡೆಸಿದ್ದರು. ಅಲ್ಲದೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪರ ಘೋಷಣೆಗಳನ್ನು ಕೂಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖರ್ಗೆ ಕಾರ್ಯಕ್ರಮ ಜಾಗದಲ್ಲಿ 'ಶುದ್ಧೀಕರಣ' ಪ್ರಕರಣ: ಒಂದು ತಿಂಗಳ ನಂತರ SC/ST ಕಾಯ್ದೆಯಡಿ FIR ದಾಖಲು!

ಶುರುವಾಗಿ 2 ದಿನಕ್ಕೆ Biggboss ಮನೆಯ ಗೋಡೆ ಹಾರಿ ಓಡಿಹೋದ ಸ್ಪರ್ಧಿ.. ಏನಾಯಿತು?

APMCಗೆ CM ಡಿಕೆಶಿ ದಿಢೀರ್ ಭೇಟಿ ಬೆನ್ನಲ್ಲೇ ಫೀಲ್ಡಿಗಿಳಿದ ಪೊಲೀಸರು; 19 ಬಾಲ ಕಾರ್ಮಿಕರ ರಕ್ಷಣೆ; ನಾಲ್ಕು ಅಂಗಡಿ ಮಾಲೀಕರ ಬಂಧನ!

ವಿಧಾನಸಭೆಯಲ್ಲಿ ವಿಜಯ್ ಸನ್ನೆಗೆ ಕೆರಳಿದ DMK; ಬಾಡಿ ಶೇಮಿಂಗ್ ಆರೋಪಕ್ಕೆ ಸಿಎಂ ಜೋಸೆಫ್ ವಿಜಯ್ ಸ್ಪಷ್ಟನೆ!

ರಾಹುಲ್‌ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ 10 ನಿಮಿಷ ಆಗಸದಲ್ಲೇ ಗಿರಕಿ; 2ನೇ ಪ್ರಯತ್ನದಲ್ಲಿ ಸೇಫ್‌ ಲ್ಯಾಂಡಿಂಗ್!