ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ 
ದೇಶ

ಸದಾಕಾಲ ವಿಶೇಷ ಭದ್ರತಾ ಪಡೆಗಳ ನಡುವೆ ರಾಹುಲ್ ಸಾಮಾನ್ಯರ ಭೇಟಿಯಾಗಲು ಸಾಧ್ಯವಿಲ್ಲ; ಕಾಂಗ್ರೆಸ್

ಹೋದಲ್ಲೆಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ವಿಶೇಷ ಭದ್ರತಾ ಪಡೆಗಳಿಂದ ಭದ್ರತೆ ಪಡೆದುಕೊಂಡು ಸಾಮಾನ್ಯ ಜನರನ್ನು ಭೇಟಿ ಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮಂಗಳವಾರ...

ನವದೆಹಲಿ: ಹೋದಲ್ಲೆಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ವಿಶೇಷ ಭದ್ರತಾ ಪಡೆಗಳಿಂದ ಭದ್ರತೆ ಪಡೆದುಕೊಂಡು ಸಾಮಾನ್ಯ ಜನರನ್ನು ಭೇಟಿ ಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮಂಗಳವಾರ ಹೇಳಿದೆ. 
ಈ ಕುರಿತಂತೆ ಮಾತನಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಸಾಮಾನ್ಯ ಜನರನ್ನು ಭೇಟಿ ಮಾಡಲು ಹೋದಾಗ ಪ್ರತೀ ಬಾರಿ ವಿಶೇಷ ಭದ್ರತಾ ಪಡೆಗಳಿಂದ ಭದ್ರತೆಯನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಸಂಸದೀಯ ಪ್ರಜಾಪ್ರಭುತ್ವದಲ್ಲಿ ಭದ್ರತೆ ನೀಡುವುದು ಮುಖ್ಯವಾಗಿರುತ್ತದೆ. ಆದರೆ, ಗುಜರಾತ್ ನಲ್ಲಿ ಅದು ಕಾಣಿಸುತ್ತಿಲ್ಲ ಎಂದು ಹೇಳಿದ್ದಾರೆ. 
ಗುಜರಾತ್ ರಾಜ್ಯದಲ್ಲಿ ಸೂಕ್ತ ರೀತಿಯ ಭದ್ರತೆಯನ್ನು ಒದಗಿಸದ ಬಿಜೆಪಿ, ರಾಹುಲ್ ಗಾಂಧಿಯವರ ವಿದೇಶ ಪ್ರವಾಸ ಹಿಡಿದು ಜನರನ್ನು ತಪ್ಪು ಹಾದಿಗೆಳೆಯುತ್ತಿದೆ. ಅಧಿವೇಶನದ ವೇಳೆ ನಾವು ಕೇಳಿದ್ದ ಪ್ರಶ್ನೆಯೇ ಒಂದಾಗಿದ್ದರೆ, ಸರ್ಕಾರದ ಉತ್ತರವೇ ಒಂದಾಗಿದೆ. ಘಟನೆಗೆ ಖಂಡನೆ ವ್ಯಕ್ತಪಡಿಸುವ ಬದಲು ಇಂತಹ ಕೃತ್ಯಗಳಿಗೆ ಉತ್ತೇಜನವನ್ನು ನೀಡುತ್ತಿದ್ದಾರೆ. ಇದು ನಿಜಕ್ಕೂ ಬಹಳ ಬೇಸರವನ್ನು ತಂದಿದೆ. ಈ ರೀತಿಯ ಬೆಳವಣಿಗೆಗಳು ನಡೆಯಬಾರದು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT