ಕಿರಣ್ ಖೇರ್ 
ದೇಶ

ಚಂಡೀಗಢ ಯುವತಿಗೆ ಕಿರುಕುಳ: ರಾತ್ರಿಯಲ್ಲಿ ಹುಡುಗರನ್ನು ಮನೆಯಲ್ಲಿರಿಸಿ, ಹುಡುಗಿಯರನ್ನಲ್ಲ: ಕಿರಣ್ ಖೇರ್

ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಅವರ ಪುತ್ರ ವಿಕಾಸ್ ಬರಾಲಾ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಪುತ್ರಿಗೆ ಕಿರುಕುಳ ನೀಡಿದ ಪ್ರಕರಣ ಇದೀಗ ದೇಶದಲ್ಲಿ

ನವದೆಹಲಿ: ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಅವರ ಪುತ್ರ ವಿಕಾಸ್ ಬರಾಲಾ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಪುತ್ರಿಗೆ ಕಿರುಕುಳ ನೀಡಿದ ಪ್ರಕರಣ ಇದೀಗ ದೇಶದಲ್ಲಿ ಸಂಚಲನ ಮೂಡಿಸುತ್ತಿದ್ದು ಇದಕ್ಕೆ ಬಿಜೆಪಿ ಸಂಸದೆ ಕಿರಣ್ ಖೇರ್ ಅವರು ಕಿಡಿಕಾರಿದ್ದಾರೆ. 
ಈ ಪ್ರಕರಣ ಕುರಿತಂತೆ ಪರ ವಿರೋಧ ಹೇಳಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಅಸಮಧಾನ ವ್ಯಕ್ತಪಡಿಸಿದ ಕಿರಣ್ ಖೇರ್ ಅವರು ಬರೀ ಹುಡುಗಿಯರಿಗೆ ಮಾತ್ರ ನಿರ್ಬಂಧಗಳನ್ನು ಹಾಕುವುದು ಸರಿಯಲ್ಲ ಇಂತಹ ನಿರ್ಬಂಧಗಳನ್ನು ಹುಡುಗರಿಗೂ ಹಾಕಬೇಕು ಎಂದು ಹೇಳಿದ್ದಾರೆ. 
ಸಂಸತ್ ಭವನದ ಆವರಣದಲ್ಲಿ ಮಾತನಾಡಿದ ಕಿರಣ್ ಖೇರ್ ಅವರು ರಾತ್ರಿ ವೇಳೆ ಹುಡುಗರನ್ನು ಮನೆಯಲ್ಲಿ ಇರಿಸಬೇಕು. ರಾತ್ರಿ ವೇಳೆಯಲ್ಲಿ ಮಾತ್ರ ಇಂತಹ ಘಟನೆಗಳು ನಡೆಯುತ್ತಿದ್ದು ಹಗಲಿನಲ್ಲಿ ನಡೆಯುತ್ತಿಲ್ಲ? ಹೀಗಾಗಿ ಹುಡುಗರನ್ನು ರಾತ್ರಿ ವೇಳೆ ಹೊರಗಡೆ ಹೋಗದಂತೆ ನಿರ್ಬಂಧ ಹೇರಬೇಕು ಎಂದರು. 
ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಆರೋಪಿ ವಿಕಾಸ್ ಬರಾಲಾ ಮತ್ತು ಆತನ ಸ್ನೇಹಿತ ಆಶೀಶ್ ನನ್ನು ಚಂಢಿಗಡ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 
ಕಳೆದ ವಾರ ಚಂಡೀಗಢದ ಯುವತಿ ವರ್ನಿಕಾ ಕುಂದು ಅವರ ಕಾರನ್ನು ಹಿಂಬಾಲಿಸಿ ವಿಕಾಸ್ ಬರಾಲಾ ಅವರು ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತ ಯುವತಿ ಆರೋಪಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT