ನವದೆಹಲಿ: ಹರಿಯಾಣ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಅವರ ಪುತ್ರ ವಿಕಾಸ್ ಬರಾಲಾ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಪುತ್ರಿಗೆ ಕಿರುಕುಳ ನೀಡಿದ ಪ್ರಕರಣ ಇದೀಗ ದೇಶದಲ್ಲಿ ಸಂಚಲನ ಮೂಡಿಸುತ್ತಿದ್ದು ಇದಕ್ಕೆ ಬಿಜೆಪಿ ಸಂಸದೆ ಕಿರಣ್ ಖೇರ್ ಅವರು ಕಿಡಿಕಾರಿದ್ದಾರೆ.
ಈ ಪ್ರಕರಣ ಕುರಿತಂತೆ ಪರ ವಿರೋಧ ಹೇಳಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಅಸಮಧಾನ ವ್ಯಕ್ತಪಡಿಸಿದ ಕಿರಣ್ ಖೇರ್ ಅವರು ಬರೀ ಹುಡುಗಿಯರಿಗೆ ಮಾತ್ರ ನಿರ್ಬಂಧಗಳನ್ನು ಹಾಕುವುದು ಸರಿಯಲ್ಲ ಇಂತಹ ನಿರ್ಬಂಧಗಳನ್ನು ಹುಡುಗರಿಗೂ ಹಾಕಬೇಕು ಎಂದು ಹೇಳಿದ್ದಾರೆ.
ಸಂಸತ್ ಭವನದ ಆವರಣದಲ್ಲಿ ಮಾತನಾಡಿದ ಕಿರಣ್ ಖೇರ್ ಅವರು ರಾತ್ರಿ ವೇಳೆ ಹುಡುಗರನ್ನು ಮನೆಯಲ್ಲಿ ಇರಿಸಬೇಕು. ರಾತ್ರಿ ವೇಳೆಯಲ್ಲಿ ಮಾತ್ರ ಇಂತಹ ಘಟನೆಗಳು ನಡೆಯುತ್ತಿದ್ದು ಹಗಲಿನಲ್ಲಿ ನಡೆಯುತ್ತಿಲ್ಲ? ಹೀಗಾಗಿ ಹುಡುಗರನ್ನು ರಾತ್ರಿ ವೇಳೆ ಹೊರಗಡೆ ಹೋಗದಂತೆ ನಿರ್ಬಂಧ ಹೇರಬೇಕು ಎಂದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಆರೋಪಿ ವಿಕಾಸ್ ಬರಾಲಾ ಮತ್ತು ಆತನ ಸ್ನೇಹಿತ ಆಶೀಶ್ ನನ್ನು ಚಂಢಿಗಡ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಕಳೆದ ವಾರ ಚಂಡೀಗಢದ ಯುವತಿ ವರ್ನಿಕಾ ಕುಂದು ಅವರ ಕಾರನ್ನು ಹಿಂಬಾಲಿಸಿ ವಿಕಾಸ್ ಬರಾಲಾ ಅವರು ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತ ಯುವತಿ ಆರೋಪಿಸಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos