ಡಿಜಿಪಿ ತಜೇಂದರ್ ಸಿಂಗ್ ಲುಥ್ರಾ 
ದೇಶ

ಚಂಡೀಗಢ: ಯುವತಿಗೆ ಕಿರುಕುಳ ಪ್ರಕರಣ; ರಕ್ತ, ಮೂತ್ರ ಮಾದರಿ ನೀಡಲು ವಿಕಾಸ್ ಬರಾಲಾ ನಕಾರ

ಐಎಎಸ್ ಅಧಿಕಾರಿಯೊಬ್ಬರ ಪುತ್ರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಅವರ ಪುತ್ರ ವಿಕಾಸ್ ಬರಾಲಾ ವೈದ್ಯಕೀಯ ಪರೀಕ್ಷೆಗಾಗಿ ರಕ್ತ ಹಾಗೂ ಮೂತ್ರದ ಮಾದರಿ ನೀಡಲು ನಿರಾಕರಿಸುತ್ತಿದ್ದಾರೆಂದು...

ಚಂಡೀಗಢ: ಐಎಎಸ್ ಅಧಿಕಾರಿಯೊಬ್ಬರ ಪುತ್ರಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಅವರ ಪುತ್ರ ವಿಕಾಸ್ ಬರಾಲಾ ವೈದ್ಯಕೀಯ ಪರೀಕ್ಷೆಗಾಗಿ ರಕ್ತ ಹಾಗೂ ಮೂತ್ರದ ಮಾದರಿ ನೀಡಲು ನಿರಾಕರಿಸುತ್ತಿದ್ದಾರೆಂದು ಡಿಜಿಪಿ ತಜೇಂದರ್ ಸಿಂಗ್ ಲುಥ್ರಾ ಅವರು ಬುಧವಾರ ಹೇಳಿದ್ದಾರೆ. 
ಚಂಡೀಗಢ ಯುವತಿ ಕಿರುಕುಳ ಪ್ರಕರಣ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿರುವ ಡಿಜಿಪಿ ತಜೇಂದರ್ ಸಿಂಗ್ ಅವರು, ಪ್ರಕರಣ ಸಂಬಂಧ ಕರ್ತವ್ಯ ನಿರತ ವೈದ್ಯರು ರಕ್ತ ಹಾಗೂ ಮೂತ್ರದ ಮಾದರಿ ನೀಡುವಂತೆ ಆರೋಪಿಗಳ ಬಳಿ ಕೇಳಿದ್ದಾರೆ. ಆದರೆ, ಆರೋಪಿಗಳು ಕಾನೂನು ವಿದ್ಯಾರ್ಥಿಗಳಾಗಿರುವುದಿಂದ ಕಾನೂನಿನ ಬಗ್ಗೆ ಚೆನ್ನಾಗಿ ತಿಳಿದುಕೊಂಡಿದ್ದರಿಂದಾಗಿ ರಕ್ತ ಹಾಗೂ ಮೂತ್ರ ಮಾದರಿ ನೀಡಲು ನಿರಾಕರಿಸುತ್ತಿದ್ದಾರೆಂದು ಹೇಳಿದ್ದಾರೆ. 
ಈ ರೀತಿ ತನಿಖೆಗೆ ಸಹಕಾರ ನೀಡದಿದ್ದರೂ ಆರೋಪಿಗಳನ್ನು ಬಂಧನಕ್ಕೊಳಪಡಿಸಬಹುದಾಗಿದೆ. ತನಿಖೆ ಬಹಳ ಸಮಯ ತೆಗೆದುಕೊಳ್ಳುವುದಿಲ್ಲ. ಸತ್ಯವನ್ನು ಬಯಲಿಗೆಳೆಯಲಾಗುತ್ತದೆ. ಈಗಾಗಲೇ ನಾವು 6 ವಿವಿಧ ಪ್ರದೇಶಗಳಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು ತೆಗೆದುಕೊಂಡಿದ್ದೇವೆ. ದೃಶ್ಯಾವಳಿಗಳಲ್ಲಿ ಆರೋಪಿಗಳು ಯುವತಿಯನ್ನು ಹಿಂಬಾಲಿಸಿರುವುದು ಸ್ಪಷ್ಟವಾಗಿದೆ. ಪ್ರಕರಣ ಸಂಬಂಧ ನಮ್ಮ ಬಳಿ ಸಾಕಷ್ಟು ಸಾಕ್ಷ್ಯಾಧಾರಗಳು ದೊರಕಿವೆ. ಮತ್ತಷ್ಟು ಸಾಕ್ಷ್ಯಾಧಾರಗಳು ದೊರಕಿದರೆ ಉತ್ತಮವಾಗುತ್ತದೆ ಎಂದು ತಿಳಿಸಿದ್ದಾರೆ. 
ತನಿಖೆ ಈಗಾಗಲೇ ಗಂಭೀರ ಮಟ್ಟಕ್ಕೆ ತಲುಪಿದ್ದು, ಹೀಗಾಗಿಯೇ ಆರೋಪಿಗಳಾದ ವಿಕಾಸ್ ಬರಾಲಾ ಹಾಗೂ ಆಶಿಷ್ ಕುಮಾರ್ ಇಬ್ಬರಿಗೂ ಸಮನ್ಸ್ ಜಾರಿ ಮಾಡಲಾಗಿದೆ. ಆರೋಪಿಗಳು ಠಾಣೆಗೆ ಬಂದ ಬಳಿಕ ವಿಚಾರಣೆಗೊಳಪಡಿಸಲಾಗುತ್ತದೆ ಎಂದಿದ್ದಾರೆ. 
ಚಂಡೀಗಢದ ಹೆದ್ದಾರಿಯಲ್ಲಿ ಬಿಜೆಪಿ ಮುಖ್ಯಸ್ಥ ಸುಭಾಷ್ ಬರಾಲಾ ಪುತ್ರ ವಿಕಾಸ್ ಬರಾಲಾ, ವರ್ಣಿಕಾ ಕುಂಡು ಎಂಬ ಯುವತಿಯ ಕಾರನ್ನು ಹಿಂಬಾಲಿಸಿದ್ದಲ್ಲದೇ, ಆಕೆಯನ್ನು ಅಪಹರಿಸಲು ಯತ್ನ ನಡೆಸಿದ್ದ. ಈ ಘಟನೆ ದೇಶದಾದ್ಯಂತ ಭಾರೀ ಸುದ್ದಿಗೆ ಗ್ರಾಸವಾಗಿದ್ದು, ಪ್ರತಿಭಟನೆಗಳು ವ್ಯಕ್ತವಾದ ಬಳಿಕ ಪೊಲೀಸರು ವಿಕಾಸ್ ಅವರನ್ನು ಬಂಧನಕ್ಕೊಳಪಡಿಸಿದ್ದರು. ನಂತರ ಬಿಡುಗಡೆ ಮಾಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT