ಕಾಶ್ಮೀರ ಪ್ರತ್ಯೇಕತಾವಾದಿ ಮುಖಂಡ ಶಬ್ಬೀರ್ ಶಾ
ನವದೆಹಲಿ: ಕಾಶ್ಮೀರ ಪ್ರತ್ಯೇಕತಾವಾದಿ ಮುಖಂಡ ಶಬ್ಬೀರ್ ಶಾ ಗೆ ದೆಹಲಿ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೊಳಪಡಿಸಿದೆ.
ಕಳೆದ 10 ವರ್ಷಗಳ ಹಿಂದೆ ಉಗ್ರರಿಗೆ ಹಣಕಾಸು ಒದಗಿಸಿದ ಆರೋಪದ ಕೇಸ್ ಗೆ ಸಂಬಂಧಿಸಿದಂತೆ ಶಬ್ಬೀರ್ ಶಾ ನನ್ನು ಬಂಧಿಸಲಾಗಿತ್ತು.
ದೆಹಲಿ ಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿ ಸಿದ್ದಾರ್ಥ್ ಶರ್ಮಾ ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದಾರೆ. ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿ ಹೆಚ್ಚಿನ ವಿಚಾರಣೆಗೊಳಪಡಿಸುವ ಅವಶ್ಯಕತೆಯಿಲ್ಲ ಎಂದು ಕೋರ್ಟ್ ಹೇಳಿದೆ.
ಶಬ್ಬೀರ್ ಶಾ ದೇಶ ಬಿಟ್ಟು ಓಡಿ ಹೋಗುತ್ತಾನೆ ಎಂಬ ಹಿನ್ನೆಲೆಯಲ್ಲಿ ಆಗಸ್ಟ್ 3 ರಂದು ಕೋರ್ಟ್ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ವಶಕ್ಕೆ ನೀಡಿತ್ತು. ಹಲವು ಹುರಿಯತ್ ಮುಖಂಡರುಗಳ ಬಂಧನದ ನಂತರ ಶಾ ನನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬಂಧಿಸಿದ್ದರು.
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಈ ಹಿಂದೆ ತನಿಖೆಗೆ ಹಾಜರಾಗುವಂತೆ ಹಲವು ಬಾರಿ ಶಾಗೆ ಸಮನ್ಸ್ ಜಾರಿ ಮಾಡಿತ್ತು. ಆದರೆ, ಇದಾವುದಕ್ಕೂ ಶಾ ಪ್ರತಿಕ್ರಿಯೆಗಳನ್ನು ನೀಡದ ಹಿನ್ನಲೆಯಲ್ಲಿ ದೆಹಲಿ ನ್ಯಾಯಾಲಯ ಶಾ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos