ಮರಾಠಿಗರ ಬೃಹತ್ ಪ್ರತಿಭಟನೆ 
ದೇಶ

ಮೀಸಲಾತಿಗೆ ಆಗ್ರಹಿಸಿ ಮರಾಠಿಗರಿಂದ ಬೃಹತ್‌ ಪ್ರತಿಭಟನೆ, ಮುಂಬೈ ಸ್ತಬ್ಧ

ಮರಾಠಿಗರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಬೇಕೆಂದು ಆಗ್ರಹಿಸಿ ಬುಧವಾರ ಮರಾಠ ಸಮುದಾಯದ ಲಕ್ಷಾಂತರ....

ಮುಂಬೈ: ಮರಾಠಿಗರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಬೇಕೆಂದು ಆಗ್ರಹಿಸಿ ಬುಧವಾರ ಮರಾಠ ಸಮುದಾಯದ ಲಕ್ಷಾಂತರ ಜನರು ಮುಂಬೈನ  ಆಜಾದ್‌ ಮೈದಾನದಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದು, ವಾಣಿಜ್ಯ ನಗರಿ ಸಂಪೂರ್ಣ ಸ್ತಬ್ಧಗೊಂಡಿದೆ. 
ಇಂದು  ಬೆಳಗ್ಗೆ 11 ಗಂಟೆಗೆ ಮರಾಠ ಕ್ರಾಂತಿ ಮೋರ್ಚಾದ ನೇತೃತ್ವದಲ್ಲಿ ಬೈಕುಲಾದ ವೀರಮಾತಾ ಜೀಜಾಬಾಯಿ ಭೋಸ್ಲೆ ಉದ್ಯಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ, ರಾಣಿಬಾಗ್‌ನಿಂದ ಸಾಗಿ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್‌ ಮಾರ್ಗವಾಗಿ ಆಜಾದ್‌ ಮೈದಾನ ತಲುಪಿದೆ.
ಈ ಬೃಹತ್ ಪ್ರತಿಭಟನಾ ಮೆರವಣಿಗೆಯಿಂದಾಗಿ ಮುಂಬೈನ ಜನ ಜೀವನ ಅಸ್ತವ್ಯಸ್ತವಾಗಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗದಿರಲೆಂದು ಮುಂಬೈನ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮೀಸಲಾತಿಗೆ ಒತ್ತಾಯಿಸಿ ಮರಾಠಿಗರು ಮೌನ ಪ್ರತಿಭಟನೆ ನಡೆಸುತ್ತಿದ್ದು, ಮುಂಬೈನಲ್ಲಿ ನಡೆಯುತ್ತಿರುವ ಅತ್ಯಂತ ಬೃಹತ್‌ ಪ್ರತಿಭಟನೆ ಇದಾಗಿದೆ ಎನ್ನಲಾಗುತ್ತಿದೆ. ಇದುವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 57 ಮೋರ್ಚಾಗಳು ನಡೆದಿದ್ದು 58ನೇ ಬೃಹತ್‌ ಮೋರ್ಚಾ ಮುಂಬಯಿಯಲ್ಲಿ ನಡೆಯುತ್ತಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT