ವಿಜಯಪತ್ ಸಿಂಗಾನಿಯಾ 
ದೇಶ

ಬೀದಿಗೆ ಬಂದ ರೇಮಂಡ್‌ ಕಂಪನಿಯ ಮಾಲೀಕ, ಮನೆ ಬಾಡಿಗೆ ಕಟ್ಟಲು ಹೆಣಗಾಟ!

ಸಾವಿರಾರು ಕೋಟಿ ರುಪಾಯಿಗಳ ಒಡೆಯ, ದೇಶದ ಸಿರಿವಂತರಲ್ಲಿ ಒಬ್ಬರಾಗಿದ್ದ ರೇಮಂಡ್‌ ವಸ್ತ್ರ ಕಂಪನಿಯ ಮಾಲೀಕ ವಿಜಯಪತ್‌ ಸಿಂಗಾನಿಯಾ...

ಮುಂಬೈ: ಸಾವಿರಾರು ಕೋಟಿ ರುಪಾಯಿಗಳ ಒಡೆಯ, ದೇಶದ ಸಿರಿವಂತರಲ್ಲಿ ಒಬ್ಬರಾಗಿದ್ದ ರೇಮಂಡ್‌ ವಸ್ತ್ರ ಕಂಪನಿಯ ಮಾಲೀಕ ವಿಜಯಪತ್‌ ಸಿಂಗಾನಿಯಾ ಅವರು ಈಗ ಅಕ್ಷರ ಸಹ ಬೀದಿಗೆ ಬಂದಿದ್ದು, ಹಣಕಾಸು ನೆರವಿಗಾಗಿ ಮಗನ ವಿರುದ್ಧವೇ ಕೋರ್ಟ್‌ ಮೆಟ್ಟಿಲೇರಿದ್ದಾರೆ.
ರೇಮಂಡ್ಸ್ ಲಿಮಿಟೆಡ್ ಎಂಬ ವಸ್ತ್ರೋದ್ಯಮ ಸ್ಥಾಪಿಸಿ ಪುರುಷರ ಮನೆ ಮಾತಾಗಿದ್ದ ರೇಮಂಡ್‌ ಕಂಪೆನಿಯ ಮಾಲೀಕ ಇಂದು ಮಗನ ನಿರ್ಲಕ್ಷದಿಂದ ಬಾಡಿಗೆ ಮನೆಯಲ್ಲಿ ವಾಸ ಮಾಡುವಂತಾಗಿದೆ ಎಂದು ಮುಂಬೈ ಮಿರರ್‌ ವರದಿ ಮಾಡಿದೆ.
ವಿಜಯಪತ್‌ ತಮ್ಮ ಎಲ್ಲಾ ಆಸ್ತಿ ಹಾಗೂ ಕಂಪೆನಿಯ ಷೇರುಗಳನ್ನು ಮಗ ಗೌತಮ್‌ ಸಿಂಗಾನಿಯಾ ಅವರಿಗೆ ಬರೆದುಕೊಟ್ಟಿದ್ದಾರೆ. ಮುಂಬೈನಲ್ಲಿರುವ 36 ಅಂತಸ್ತಿನ ಜೆ.ಕೆ.  ಹೌಸ್‌ನಿಂದ ವಿಜಯಪತ್‌ ಅವರನ್ನು ಮಗ ಗೌತಮ್‌ ಹೊರ ಹಾಕಿದ್ದಾರೆ.
ಬಾಡಿಗೆ ಮನೆಯಲ್ಲಿ ವಾಸವಾಗಿರುವ ವಿಜಯಪತ್‌ ಅವರು ಬಾಡಿಗೆ ಕಟ್ಟಲು ಹರಸಾಹಸ ಪಡುತ್ತಿದ್ದಾರೆ. ಇದರ ಜತೆಗೆ ಅವರಿಗೆ ನೀಡಿದ್ದ ಕಾರನ್ನು ಗೌತಮ್‌ ವಾಪಸ್ ಪಡೆದಿದ್ದಾರೆ ಎಂದು ವರದಿ ಮಾಡಲಾಗಿದೆ.
ವಿಜಯಪತ್‌ ಅವರು ಈಗ ಮಲಬಾರ್ ಹಿಲ್ ನಲ್ಲಿರುವ 36 ಅಂತಸ್ತಿನ ಜೆಕೆ ಹೌಸ್ ನಲ್ಲಿ ಒಂದು ಡುಫ್ಲೆಕ್ಸ್‌ ಮನೆ, ಕಾರು ಹಾಗೂ ಪ್ರತಿ ತಿಂಗಳು 7 ಲಕ್ಷ ರುಪಾಯಿ ಹಣವನ್ನು ಕೊಡಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಿವೃತ್ತ ಉದ್ಯಮಿ ವಿಜಯಪತ್ ಅವರು ಬಿಡಿಗಾಸಿಗೂ ಪರದಾಡುತ್ತಿದ್ದಾರೆ ಎಂದು ಅವರ ಪರ ವಾದಿಸುತ್ತಿರುವ ವಕೀಲರು ಹೇಳಿರುವುದಾಗಿ ಮುಂಬೈ ಮಿರರ್ ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT