ಬಾಬ್ರಿ ಮಸೀದಿ 
ದೇಶ

ಮಂದಿರ ಕೆಡವಿ ಬಾಬ್ರಿ ಮಸೀದಿ ನಿರ್ಮಾಣ ಮಾಡಲಾಗಿತ್ತು: ಶಿಯಾ ವಕ್ಫ್ ಮಂಡಳಿ

ಬಾಬ್ರಿ ಮಸೀದಿ ಪ್ರಕರಣಕ್ಕೆ ಮತ್ತೊಂದು ತಿರುವು ದೊರೆತಿದ್ದು, ಬಾಬ್ರಿ ಮಸೀದಿಯ ಒಡೆತನವನ್ನು ಸುನ್ನಿ ಪಂಗಡಕ್ಕೆ ನೀಡಲಾಗಿದ್ದ 71 ವರ್ಷದ ಹಿಂದಿನ ಆದೇಶವನ್ನು ಪ್ರಶ್ನಿಸಿ ಶಿಯಾ ವಕ್ಫ್ ಮಂಡಳಿ ಪ್ರಶ್ನಿಸಿದೆ.

ನವದೆಹಲಿ: ಬಾಬ್ರಿ ಮಸೀದಿ ಪ್ರಕರಣಕ್ಕೆ ಮತ್ತೊಂದು ತಿರುವು ದೊರೆತಿದ್ದು, ಬಾಬ್ರಿ ಮಸೀದಿಯ ಒಡೆತನವನ್ನು ಸುನ್ನಿ ಪಂಗಡಕ್ಕೆ ನೀಡಲಾಗಿದ್ದ 71 ವರ್ಷದ ಹಿಂದಿನ ಆದೇಶವನ್ನು ಪ್ರಶ್ನಿಸಿ ಶಿಯಾ ವಕ್ಫ್ ಮಂಡಳಿ ಪ್ರಶ್ನಿಸಿದೆ. 
ಶುಕ್ರವಾರದಂದು ಬಾಬ್ರಿ ಮಸೀದಿ-ರಾಮ ಮಂದಿರ ಪ್ರಕರಣದ ವಿಚಾರಣೆ ನಡೆಯಲಿದ್ದು, ಇದೇ ವೇಳೆ  ಬಾಬ್ರಿ ಮಸೀದಿಯ ಒಡೆತನವನ್ನು ಸುನ್ನಿ ಪಂಗಡಕ್ಕೆ ನೀಡಲಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಬೇಕೆಂದು ಮನವಿ ಸಲ್ಲಿಸಿದೆ. ಅಷ್ಟೇ ಅಲ್ಲದೇ ಅರ್ಜಿಯಲ್ಲಿ ಮಸೀದಿಯನ್ನು ಬಾಬರನ ಸಚಿವ ಅಬ್ದುಲ್ ಮೀರ್ ಬಾಖಿ ತನ್ನ ಸ್ವಂತ ಖರ್ಚಿನಿಂದ ನಿರ್ಮಿಸಿದ್ದ, ಮೀರ್ ಬಾಖಿ ಶಿಯಾ ಪಂಗಡಕ್ಕೆ ಸೇರಿದ್ದ, ಆತ ಮಂದಿರವನ್ನು ಕೆಡವಿ ಮಸೀದಿಯನ್ನು ನಿರ್ಮಿಸಿದ್ದ ಎಂದು ಶಿಯಾ ವಕ್ಫ್ ಮಂಡಳಿ ಹೇಳಿದೆ. 
ಬಾಬ್ರಿ ಮಸೀದಿ ಒಡತನದ ಬಗ್ಗೆ ಸುನ್ನಿ ಹಾಗೂ ಶಿಯಾ ಪಂಗಡಗಳ ನಡುವಿನ ವ್ಯಾಜ್ಯವನ್ನು ಆಲಿಸಿದ್ದ ವಿಚಾರಣಾ ನ್ಯಾಯಾಲಯವು 1946 ಮಾರ್ಚ್ 30ರಂದು ಸುನ್ನೀ ಪಂಗಡ ಪರವಾಗಿ ತೀರ್ಪು ನೀಡಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT